ಕಿರಣ್ ರಿಜಿಜು 
ದೇಶ

ತಪ್ಪು ಮಾಡಿಲ್ಲ, ಸುಮ್ಮನೆ ಆರೋಪ ಮಾಡಿದರೆ ಬೂಟಿನೇಟು: ಕಿರಣ್ ರಿಜಿಜು

ಕೇಂದ್ರ ಸಚಿವ ಕಿರುಣ್ ರಿಜಿಜು ಅವರು ತಮ್ಮ ವಿರುದ್ಧ ಸುಳ್ಳು ಆರೋಪ ಮಾಡುವವರಿಗೆ ಬೂಟಿನಿಂದ ಹೊಡೆಯಲಾಗುವುದು ಎಂದು ಹೇಳಿದ್ದಾರೆ...

ನವದೆಹಲಿ: ಕೇಂದ್ರ ಸಚಿವ ಕಿರುಣ್ ರಿಜಿಜು ಅವರು ತಮ್ಮ ವಿರುದ್ಧ ಸುಳ್ಳು ಆರೋಪ ಮಾಡುವವರಿಗೆ ಬೂಟಿನಿಂದ ಹೊಡೆಯಲಾಗುವುದು ಎಂದು ಹೇಳಿದ್ದಾರೆ. 
ಅರುಣಾಚಲ ಪ್ರದೇಶದಲ್ಲಿ ಬೃಹತ್ ಜಲ ವಿದ್ಯುತ್ ಘಟಕ ನಿರ್ಮಾಣವಾಗಲಿದ್ದು ಈ ಸಂಬಂಧ 450 ಕೋಟಿ ರುಪಾಯಿ ಭ್ರಷ್ಟಾಚಾರದಲ್ಲಿ ಕಿರಣ್ ರಿಜಿಜು ಅವರು ಭಾಗಿಯಾಗಿದ್ದಾರೆ ಎಂಬ ಗಂಭೀರ ಆರೋಪವನ್ನು ಕಾಂಗ್ರೆಸ್ ಮಾಡಿತ್ತು. ಅಲ್ಲದೆ ಕಿರಣ್ ರಿಜಿಜು ಅವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಬಗ್ಗೆ ಆಡಿಯೋ ಸಾಕ್ಷ್ಯಗಳು ಲಭಿಸಿರುವುದರಿಂದ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿತ್ತು.
ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕಿರಣ್ ರಿಜಿಜು ಅವರು ಇದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವವರಿಗೆ ಬೂಟಿನಿಂದ ಒಡೆಯಲಾಗುವುದು ಎಂದು ಹೇಳಿದ್ದಾರೆ. 
ಕಿರಣ್ ರಿಜಿಜು ಅವರ ಸಂಬಂಧಿ ಗೊಬೋಯಿ ರಿಜಿಜು ಎಂಬುವರು ಈ ಜಲ ವಿದ್ಯುತ್ ಘಟಕದ ಉಪ ಗುತ್ತಿಗೆದಾರರಾಗಿದ್ದಾರೆ. ಜಲ ವಿದ್ಯುತ್ ಯೋಜನೆಗಾಗಿ ಎರಡು ಅಣೆಕಟ್ಟುಗಳನ್ನು ನಿರ್ಮಿಸುತ್ತಿರುವ ರಾಜ್ಯ ಸರ್ಕಾರದ ನಿರ್ಮಿಸುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT