ಸಾಂದರ್ಭಿಕ ಚಿತ್ರ 
ದೇಶ

ಅತ್ಯಾಚಾರದಿಂದ ಮಗು ಹುಟ್ಟಿದರೆ ಅಪರಾಧಿ ಪರಿಹಾರ ನೀಡಬೇಕು: ದೆಹಲಿ ಹೈಕೋರ್ಟ್ ಆದೇಶ

ಲೈಂಗಿಕ ಅಪರಾಧಕ್ಕೆ ಬಲಿಯಾದವರ ಗುರುತನ್ನು ರಕ್ಷಿಸಲು ನ್ಯಾಯಾಂಗ ದಾಖಲೆಯಲ್ಲಿ ಎಲ್ಲಿಯೂ...

ನವದೆಹಲಿ: ಲೈಂಗಿಕ ಅಪರಾಧಕ್ಕೆ ಬಲಿಯಾದವರ ಗುರುತನ್ನು ರಕ್ಷಿಸಲು ನ್ಯಾಯಾಂಗ ದಾಖಲೆಯಲ್ಲಿ ಎಲ್ಲಿಯೂ ಅವರ ಗುರುತನ್ನು ಬಹಿರಂಗಪಡಿಸಬಾರದು ಎಂದು ವಿಚಾರಣಾ ನ್ಯಾಯಾಲಯಗಳಿಗೆ ದೆಹಲಿ ಹೈಕೋರ್ಟ್ ಆದೇಶ ನೀಡಿದೆ. ವಿಚಾರಣೆ ಸಂದರ್ಭದಲ್ಲಿ ಮತ್ತು ತೀರ್ಪು ನೀಡುವ ವೇಳೆ ಕಲ್ಪಿತ ಹೆಸರನ್ನು ಬಳಸುವಂತೆ ದೆಹಲಿ ನ್ಯಾಯಾಲಯ ಸೂಚನೆ ನೀಡಿದೆ.
ನ್ಯಾಯಮೂರ್ತಿಗಳಾದ ಆರ್.ಕೆ.ಗೌಬಾ ಮತ್ತು ಗೀತಾ ಮಿತ್ತಲ್ ಅವರನ್ನೊಳಗೊಂಡ ವಿಭಾಗೀಯ ಪೀಠ ಗಾಯಾ ಪ್ರಸಾದ್ ಪಾಲ್ ಎಂಬುವರು ಸಲ್ಲಿಸಿದ್ದ ಮನವಿ ಅರ್ಜಿಯ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಈ ತೀರ್ಪು ನೀಡಿದೆ. ಈತ ತಮ್ಮ 14 ವರ್ಷದ ಮಲ ಮಗಳಿಗೆ ಲೈಂಗಿಕ ಕಿರುಕುಳ ನೀಡಿ ಆಕೆ ಗರ್ಭವತಿಯಾಗಲು ಕಾರಣರಾಗಿದ್ದಲ್ಲದೆ ಪದೇ ಪದೇ ಆಕೆಗೆ ಬೆದರಿಕೆಯೊಡ್ಡುತ್ತಿದ್ದರು ಎನ್ನಲಾಗಿದೆ. ಗಾಯಾ ಪ್ರಸಾದ್ ಪಾಲ್ ಗೆ ವಿಚಾರಣಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ನ್ಯಾಯಾಲಯ ತನ್ನ ತೀರ್ಪಿನಲ್ಲಿ, ಅತ್ಯಾಚಾರದಿಂದ ಹುಟ್ಟಿದ ಮಗು ಪರಿಹಾರಕ್ಕೆ ಅರ್ಹವಾಗಿರುತ್ತದೆ. ಪರಿಹಾರವನ್ನು ಮಗುವಿನ ತಾಯಿಗೆ ನೀಡಬೇಕು. ಆ ಮಗುವಿನ ತಾಯಿ ಮೈನರ್ ಆಗಿರಲಿ, ಇಲ್ಲವೇ ವಯಸ್ಕಳಾಗಿರಲಿ ಆಕೆಗೆ ಮಗು ಹುಟ್ಟಿದರೆ ಅಪರಾಧಿ ಪರಿಹಾರ ನೀಡಬೇಕೆಂದು ಕೋರ್ಟ್ ಆದೇಶ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT