ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ 
ದೇಶ

ನಿರಾಶೆಗೊಂಡಿರುವ ರಾಹುಲ್ ಮೋದಿ ವಿರುದ್ಧ ಸಾಕ್ಷ್ಯವಿದೆ ಎಂದು ಹೇಳುತ್ತಿದ್ದಾರೆ: ಕೇಂದ್ರ

ನಿರಾಶೆ ಹಾಗೂ ಅಸಮಾಧಾನಗೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸಾಕ್ಷ್ಯಾಧಾರವಿದೆ ಎಂದು ಹೇಳುತ್ತಿದ್ದಾರೆಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ...

ನವದೆಹಲಿ: ನಿರಾಶೆ ಹಾಗೂ ಅಸಮಾಧಾನಗೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸಾಕ್ಷ್ಯಾಧಾರವಿದೆ ಎಂದು ಹೇಳುತ್ತಿದ್ದಾರೆಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ತಮ್ಮಲ್ಲಿರುವ ನಿರಾಶೆ ಹಾಗೂ ಅಸಮಾಧಾನವನ್ನು ಇಡೀ ವಿಶ್ವದ ಮುಂದೆ ವ್ಯಕ್ತಪಡಿಸಿದ್ದಾರೆ. ನಿರಾಶೆಗೊಂಡಿರುವ ರಾಹುಲ್ ಪ್ರಧಾನಿ ವಿರುದ್ದ ಹೇಳಿಕೆ ನೀಡುತ್ತಿದ್ದಾರೆಂದು ಹೇಳಿದ್ದಾರೆ.

ನಿನ್ನೆಯಷ್ಟೇ ಖಾಸಗಿ ಸುದ್ದಿ ವಾಹಿನಿಯೊಂದು ಕುಟುಕು ಕಾರ್ಯಾಚರಣೆಯನ್ನು ನಡೆಸಿತ್ತು. ಕಾಂಗ್ರೆಸ್, ಬಹುಜನ ಸಮಾಜ ಪಕ್ಷದ ಹಾಗೂ ಸಮಾಜವಾದಿ ಪಕ್ಷಗಳು ಹೇಗೆ ನೋಟು ನಿಷೇಧ ವಿಚಾರವನ್ನು ಹೇಗೆ ಬದಲಾಯಿಸುತ್ತಿದ್ದಾರೆಂಬುದನ್ನು ಬಹಿರಂಗಪಡಿಸಿದ್ದರು. ಇದರಿಂದ ನಿರಾಶೆ ಹಾಗೂ ಅಸಮಾಧಾನ ಗೊಂಡಿರುವ ರಾಹುಲ್ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆಂದು ಹೇಳಿದ್ದಾರೆ.

ಒಂದು ವೇಳೆ ರಾಹುಲ್ ಬಳಿ ಸಾಕ್ಷ್ಯಾಧಾರಗಳು ಇದ್ದಿದ್ದೇ ಆಗಿದ್ದರೆ, 20 ದಿನಗಳ ಹಿಂದೆಯೇ ಬಿಡುಗಡೆ ಮಾಡುತ್ತಿದ್ದರು. ಪ್ರಧಾನಿ ಮೋದಿ ವಿರುದ್ಧ ರಾಹುಲ್ ಅವರು ಆಧಾರ ರಹಿತ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT