ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಪ್ರಧಾನಿ ಮೋದಿ ಖುದ್ದು ಭ್ರಷ್ಟ; ನನ್ನ ಬಳಿ ಸಾಕ್ಷ್ಯ ಇದೆ: ರಾಹುಲ್ ಗಾಂಧಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಗರಣಗಳಲ್ಲಿ ಭಾಗಿಯಾಗಿದ್ದು, ಭ್ರಷ್ಟಾಚಾರ ನಡೆಸಿರುವುದಕ್ಕೆ ನನ್ನ ಬಳಿ ಸಾಕ್ಷ್ಯಾಧಾರಗಳಿವೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು...

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಗರಣಗಳಲ್ಲಿ ಭಾಗಿಯಾಗಿದ್ದು, ಭ್ರಷ್ಟಾಚಾರ ನಡೆಸಿರುವುದಕ್ಕೆ ನನ್ನ ಬಳಿ ಸಾಕ್ಷ್ಯಾಧಾರಗಳಿವೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಬುಧವಾರ ಹೇಳಿದ್ದಾರೆ.

ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಅವರು, ನನ್ನ ಬಳಿ ಸಾಕ್ಷ್ಯಾಧಾರಗಳಿರುವ ಕಾರಣ ಪ್ರಧಾನಿ ಮೋದಿಯವರು ಭಯಪಡುತ್ತಿದ್ದಾರೆ. ಸಂಸತ್ತಿನಲ್ಲಿ ಮಾತನಾಡುವುದು ನಮ್ಮ ಹಕ್ಕಾಗಿದ್ದು, ಸಂಸತ್ತಿನಲ್ಲಿ ಮಾತನಾಡಲು ಅವಕಾಶ ಮಾಡಿಕೊಡಿ ಎಂದು ಸ್ಪೀಕರ್ ಬಳಿ ಮನವಿ ಮಾಡಿಕೊಳ್ಳುತ್ತಿದ್ದೇವೆ. ಆದರೆ, ಸರ್ಕಾರ ನಮಗೆ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಆಡಳಿತಾರೂಢ ಸರ್ಕಾರ ನಮಗೆ ಸಂಸತ್ತಿನಲ್ಲಿ ಮಾತನಾಡಲು ಬಿಡುತ್ತಿಲ್ಲ. ನೋಟು ನಿಷೇಧ ಕುರಿತಂತೆ ಮಾತನಾಡಲು ನಮಗೆ ಅವಕಾಶ ಸಿಕ್ಕಿದ್ದೇ ಆದರೆ, ಈ ಬಗ್ಗೆ ನಾನು ಮಾತನಾಡುತ್ತೇನೆ. ನಾನು ಮಾತನಾಡಲು ಆರಂಭಿಸಿದರೆ, ಮೋದಿಯವರು ಸಂಸತ್ತಿನಲ್ಲಿ ಕೂರಲು ಸಾಧ್ಯವಾಗುವುದಿಲ್ಲ. ದೇಶದ ಇತಿಹಾಸದಲ್ಲಿಯೇ ನೋಟು ನಿಷೇಧ ದೊಡ್ಡ ಹಗರಣವಾಗಿದ್ದು, ಈ ಬಗ್ಗೆ ಲೋಕಸಭೆಯಲ್ಲಿ ನಾನು ಮಾತನಾಡಬೇಕು. ಎಲ್ಲವನ್ನು ಸಂಸತ್ತಿನಲ್ಲಿಯೇ ನಾನು ಮಾತನಾಡುತ್ತೇನೆಂದು ತಿಳಿಸಿದ್ದಾರೆ.

ಸಂಸತ್ತಿನಲ್ಲಿ ನನಗೆ ಮಾತನಾಡಲು ಅವಕಾಶ ಮಾಡಿಕೊಟ್ಟರೆ, ಬಲೂನ್ ಬ್ಲಾಸ್ಟ್ ಆಗುತ್ತದೆ. ಕಳೆದ ಒಂದು ತಿಂಗಳಿನಿಂದಲೂ ಎಲ್ಲಾ ವಿರೋಧ ಪಕ್ಷಗಳು ಲೋಕಸಭೆಯಲ್ಲಿ ಚರ್ಚೆ ನಡೆಸುತ್ತಿದೆ. ಚರ್ಚೆಗೆ ಪ್ರಧಾನಿ ಮೋದಿಯವರು ಆಗಮಿಸುವಂತೆ ಆಗ್ರಹಿಸುತ್ತಿದೆ. ಆದರೆ, ಆಡಳಿತಾರೂಢ ಕೇಂದ್ರ ಸರ್ಕಾರಕ್ಕೆ ಚರ್ಚೆ ಬೇಡವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT