ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ 
ದೇಶ

ತಮ್ಮ ಸಚಿವರನ್ನೇ ಗಂಭೀರವಾಗಿ ಪರಿಗಣಿಸದ ಬಿಜೆಪಿಗೆ ರಾಹುಲ್ ಎಂದರೆ ಭಯ: ಕಾಂಗ್ರೆಸ್

ತಮ್ಮ ಸಚಿವರ ಹೇಳಿಕೆಯನ್ನೇ ಗಂಭೀರವಾಗಿ ಪರಿಗಣಿಸದ ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಎಂದರೆ ಭಯವಿದೆ ಎಂದು ಕಾಂಗ್ರೆಸ್ ಗುರುವಾರ ಹೇಳಿದೆ...

ನವದೆಹಲಿ: ತಮ್ಮ ಸಚಿವರ ಹೇಳಿಕೆಯನ್ನೇ ಗಂಭೀರವಾಗಿ ಪರಿಗಣಿಸದ ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಎಂದರೆ ಭಯವಿದೆ ಎಂದು ಕಾಂಗ್ರೆಸ್ ಗುರುವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿ ತಮ್ಮ ಸಚಿವರ ಮಾತುಗಳನ್ನೇ ಗಂಭೀರವಾಗಿ ಪರಿಗಣಿಸುವುದಿಲ್ಲ, ಜನರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಹೀಗಾಗಿ ರಾಹುಲ್ ಗಾಂಧಿಯವರ ಬಗ್ಗೆ ಮಾತನಾಡುತ್ತದೆ, ಬಿಜೆಪಿಯವರಿಗೆ ರಾಹುಲ್ ಎಂದರೆ ಭಯವಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಮೋದಿ ಭ್ರಷ್ಟಾಚಾರಿ ಎಂದು ಸಾಬೀತುಪಡಿಸಲು ನನ್ನ ಬಳಿ ಸಾಕ್ಷ್ಯಾಧಾರಗಳಿವೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿಯವರಿಗೆ ಬೆಂಬಲ ಸೂಚಿಸಿರುವ ಅವರು, ಅವಕಾಶ ದೊರಕಿದ್ದೇ ಆದರೆ, ರಾಹುಲ್ ಅವರು ಸತ್ಯಾಂಶಗಳನ್ನು ಸಂಸತ್ತಿನಲ್ಲಿ ಬಹಿರಂಗ ಪಡಿಸುತ್ತಾರೆಂದು ಹೇಳಿದ್ದಾರೆ.

ನಿನ್ನೆಯಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿರುದ್ಧ ಗಂಭೀರವಾದ ಆರೋಪ ಮಾಡಿದ್ದ ರಾಹುಲ್ ಗಾಂಧಿಯವರು, ಮೋದಿಯವರು ಖುದ್ದು ಭ್ರಷ್ಟರಾಗಿದ್ದು, ಈ ಬಗ್ಗೆ ನನ್ನ ಬಳಿ ಸಾಕ್ಷ್ಯಾಧಾರಗಳಿವೆ. ಒಮ್ಮೆ ಸಂಸತ್ತಿನಲ್ಲಿ ನಾನು ಮಾತನಾಡಲು ಆರಂಭಿಸಿದರೆ ಮೋದಿಯವರು ಕುಳಿತುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿಯೇ ಸಂಸತ್ತಿಗೆ ಬರಲು ಮೋದಿ ಹೆದರುತ್ತಿದ್ದಾರೆಂದು ಆರೋಪಿಸಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ರಾಹುಲ್ ಗಾಂಧಿಯವರನ್ನು ನೋಡಿದರೆ ಪಾಪ ಎನಿಸುತ್ತದೆ. ರಾಹುಲ್ ನನ್ನು ದೇಶದ ಜನತೆ ಗಂಭೀರವಾಗಿ ಪರಿಗಣಿಸುವುದಿಲ್ಲ. ಅವರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ರಾಹುಲ್ ಮಾತನ್ನು ಯಾರೂ ನಂಬುವುದಿಲ್ಲ. ಮೋದಿಯವರ ಕಾರ್ಯ ವೈಖರಿ ಹಾಗೂ ಅದ್ಭುತ ಕಾರ್ಯಗಳನ್ನು ನೋಡಿ ರಾಹುಲ್ ಗೆ ನಂಬಲು ಸಾಧ್ಯವಾಗುತ್ತಿಲ್ಲ. ರಾಹುಲ್ ಗಾಂಧಿಗೆ ನೋವಾಗುತ್ತಿದೆ. ಹೀಗಾಗಿಯೇ ಅವರ ಮೇಲೆ ದಾಳಿ ಮಾಡುತ್ತಿದ್ದಾರೆ. ಆದರೆ, ರಾಹುಲ್ ಅವರನ್ನು ಯಾರೂ ನಂಬುವುದಿಲ್ಲ. ರಾಹುಲ್ ಅವರದ್ದು ಉತ್ತರ ಹಾಗೂ ಪ್ರತಿಕ್ರಿಯೆ ನೀಡುವಂತಹ ಹೇಳಿಕೆಯಲ್ಲ. ಮೋದಿಯವರು ಎಂದಿಗೂ ಮೋದಿಯೇ ಅವರಿಗೆ ಸಾಟಿಯಿಲ್ಲ ಎಂದು ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT