ಜಯಲಲಿತಾ 
ದೇಶ

ಜಯಲಲಿತಾ ಸಾವಿನ ಬಗ್ಗೆ ಶ್ವೇತ ಪತ್ರ ಹೊರಡಿಸಿ: ಎಂಕೆ ಸ್ಟಾಲಿನ್ ಆಗ್ರಹ

ತಮಿಳುನಾಡು ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಬಗ್ಗೆ ಅದರಲ್ಲೂ ವಿಶೇಷವಾಗಿ ಅವರ ಕೊನೆಯ ದಿನಗಳ ಬಗ್ಗೆ ಹಾಗೂ ಚಿಕಿತ್ಸೆ ಬಗ್...

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಬಗ್ಗೆ ಅದರಲ್ಲೂ ವಿಶೇಷವಾಗಿ ಅವರ ಕೊನೆಯ ದಿನಗಳ ಬಗ್ಗೆ ಹಾಗೂ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಬೇಕು ಎಂದ ಡಿಎಂಕೆ ಮಖಂಡ ಸ್ಟಾಲಿನ್ ಆಗ್ರಹಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಜಯಲಲಿತಾ ಅವರ ಆರೋಗ್ಯ ಹಾಗೂ ಸಾವಿನ ಬಗ್ಗೆ  ಜೊತೆಗೆ ಅಪೊಲೋ ಆಸ್ಪತ್ರೆ ನೀಡಿರುವ ಚಿಕಿತ್ಸೆ ಯ ವಿವರವನ್ನೊಳಗೊಂಡ ಶ್ವೇತ ಪತ್ರ ಹೊರಡಿಸಬೇಕು ಎಂದು ಸ್ಟಾಲಿನ್  ಹೇಳಿದ್ದಾರೆ.

ಚೆನ್ನೈ ನ ಎನ್ ಜಿಓ ಸಂಸ್ಥೆಯೊಂದು ಜಯಲಲಿತಾ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ನಲ್ಲಿ  ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಸ್ಟಾಲಿನ್ ಶ್ವೇತ ಪತ್ರ ಹೊರಡಿಸುವಂತೆ ಆಗ್ರಹಿಸಿದ್ದಾರೆ.

ಸೆಪ್ಟಂಬರ್ 22 ರಂದು ಅಪೊಲೋ ಆಸ್ಪತ್ರೆಗೆ ಜಯಲಲಿತಾ ದಾಖಲಾದ
ಮೇಲೆ ನೀಡಿದ ಚಿಕಿತ್ಸೆ ಸಂಬಂಧ ವೈದ್ಯಕೀಯ ದಾಖಲೆಗಳನ್ನು ನೀಡಬೇಕು ಎಂದು ಪಿಐಎಲ್ ನಲ್ಲಿ ತಿಳಿಸಲಾಗಿದೆ.

ಅಪೋಲೋ ಆಸ್ಪತ್ರೆಯ ಎರಡನೇ ಮಹಡಿಯಲ್ಲಿ  ದಾಖಲಾಗಿದ್ದ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಸರ್ಕಾರ ಯಾವುದೇ ಮಾಹಿತಿ ನೀಡರಲಿಲ್ಲ. ಆಯ್ದ ಕೆಲವರನ್ನು ಬಿಟ್ಟರೇ ಯಾರಿಗೂ ಆಸ್ಪತ್ರೆ ಒಳಗೆ ಪ್ರವೇಶವಿರಲಿಲ್ಲ. ಇದು ಹಲವು ಅಮನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT