ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ 
ದೇಶ

ಸಂಗ್ರಹಿಸಲಾಗಿರುವ ಕಪ್ಪುಹಣವನ್ನು ಬಡವರ ಖಾತೆಗಳಿಗೆ ಜಮಾ ಮಾಡಿ: ಮಾಯಾವತಿ

ಸಂಗ್ರಹ ಮಾಡಲಾಗಿರುವ ಕಪ್ಪಹಣವನ್ನು ಬಡವರ ಖಾತೆಗಳಿಗೆ ಜಮಾ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು...

ನವದೆಹಲಿ: ಸಂಗ್ರಹ ಮಾಡಲಾಗಿರುವ ಕಪ್ಪಹಣವನ್ನು ಬಡವರ ಖಾತೆಗಳಿಗೆ ಜಮಾ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ಗುರುವಾರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ದುಬಾರಿ ನೋಟಿನ ಮೇಲೆ ನಿಷೇದ ಹೇರಿ 37 ದಿನಗಳು ಕಳೆದಿವೆ. ಆದರೂ ಈಗಲೂ ಜನರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರ ಮೊದಲು ರೈತಲ ಸಾಲವನ್ನು ಮನ್ನಾ ಮಾಡೇಬೇಕಿದ್ದು, ಉದ್ಯಮಿಗಳ ಹೊಟ್ಟೆ ತುಂಬಿಸುವುದನ್ನು ನಿಲ್ಲಿಸೇಬೇಕಿದೆ ಮತ್ತು ಸಂಗ್ರಹ ಮಾಡಲಾಗಿರುವ ಕಪ್ಪುಹಣವನ್ನು ಬಡವರ ಖಾತೆಗಳಿಗೆ ಜಮಾ ಮಾಡಬೇಕಿದೆ ಎಂದು ಹೇಳಿದ್ದಾರೆ.

ಸರ್ಕಾರ ನೋಟು ನಿಷೇಧ ನಿರ್ಧಾರ ತೆಗೆದುಕೊಂಡಾಗಿನಿಂದಲೂ, ಸರ್ಕಾರದ ನಿರ್ಧಾರ ರೈತರ ಮೇಲೆ ಗಂಭೀರವಾದ ಪರಿಣಾಮ ಬೀರಿದೆ ಎಂಬ ವರದಿಗಳು ಬರುತ್ತಲೇ ಇವೆ. ನಿರ್ಧಾರ ತೆಗೆದುಕೊಂಡು 37 ದಿನಗಳು ಕಳೆದರೂ ಬಡವರು, ಕಾರ್ಮಿಕರು ಹಾಗೂ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದಿದ್ದಾರೆ.

ಇದೇ ವೇಳೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಉತ್ತರ ಪ್ರದೇಶದಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದು, ಎಲ್ಲಿ ಸೋಲು ಕಾಣುತ್ತೀವೋ ಎಂಬ ಭಯದಿಂದ ಮೋದಿ ರು.500 ಹಾಗೂ 1,000 ನೋಟುಗಳ ಮೇಲೆ ನಿಷೇಧ ಹೇರಿದ್ದಾರೆ ಎಂದು ತಿಳಿಸಿದ್ದಾರೆ.

ಈ ಮೊದಲಿನಿಂದಲೂ ನಾವು ಕಪ್ಪುಹಣ ಹಾಗೂ ಭ್ರಷ್ಟಾಚಾರದ ವಿರುದ್ಧ ಇದ್ದೇವೆ. ಆದರೆ, ಕೇಂದ್ರ ಯಾವುದೇ ಅಭಿಪ್ರಾಯ ಹಾಗೂ ಸಲಹೆಗಳನ್ನು ಕೇಳದೆಯೇ ನಿರ್ಧಾರವನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರ ನಿರ್ಧಾರ ಕಪ್ಪುಹಣದ ವಿರುದ್ಧ ತೆಗೆದುಕೊಂಡ ನಿರ್ಧಾರವಲ್ಲ. ಚುನಾವಣೆಯಲ್ಲಿ ಎಲ್ಲಿ ಸೋಲು ಕಾಣುತ್ತೀವೋ ಎಂಬ ಭಯದಿಂದ ನಿರ್ಧಾರ ತೆಗೆದುಕೊಂಡಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT