ಸಂಸತ್ತಿನಲ್ಲಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ವಿರೋಧ ಪಕ್ಷಗಳು 
ದೇಶ

ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಆಡಳಿತ ಪಕ್ಷದಿಂದ ಕಲಾಪಕ್ಕೆ ಅಡ್ಡಿ: ಕಾಂಗ್ರೆಸ್

ಎಂದಿನಂತೆ ಮತ್ತೆ ರಾಜ್ಯಸಭಾ ಕಲಾಪದಲ್ಲಿ ಗದ್ದಲವುಂಟಾಗಿದ್ದು, ಕೇಂದ್ರ ಸರ್ಕಾರದ ವಿರುದ್ದ ವಿರೋಧ ಪಕ್ಷಗಳು ತೀವ್ರವಾಗಿ ವಾಗ್ದಾಳಿ ನಡೆಸುತ್ತಿದೆ...

ನವದೆಹಲಿ: ಎಂದಿನಂತೆ ಮತ್ತೆ ರಾಜ್ಯಸಭಾ ಕಲಾಪದಲ್ಲಿ ಗದ್ದಲವುಂಟಾಗಿದ್ದು, ಕೇಂದ್ರ ಸರ್ಕಾರದ ವಿರುದ್ದ ವಿರೋಧ ಪಕ್ಷಗಳು ತೀವ್ರವಾಗಿ ವಾಗ್ದಾಳಿ ನಡೆಸುತ್ತಿದೆ.

ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷ ಬಿಜೆಪಿ ಸಂಸತ್ತು ಸರಿಯಾಗಿ ಕಾರ್ಯನಿರ್ವಹಿಸಲು ಬಿಡುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಹೇಳಿದ್ದಾರೆ.

ಕಲಾಪ ಆರಂಭವಾಗುತ್ತಿದ್ದಂತೆಯೇ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರ ಮೇಲೆ ಕೇಳಿ ಬಂದಿರುವ ರು.450 ಕೋಟಿ ಅವ್ಯವಹಾರ ಆರೋಪ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಲು ಆರಂಭಿಸಿದ್ದವು. ಇದರಂತೆ ಆಡಳಿತಾರೂಢ ಬಿಜೆಪಿ ಪಕ್ಷ ಕೂಡ ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಹಗರಣ ಪ್ರಕರಣವನ್ನು ಪ್ರಸ್ತಾಪ ಮಾಡಿತು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು, ದುಬಾರಿ ನೋಟಿನ ಮೇಲೆ ನಿಷೇಧ ಹೇರಿದ ಬಳಿಕ ರೈತರು ಸಾಕಷ್ಟು ಸಂಕಷ್ಟವನ್ನು ಎದುರಿಸುತ್ತಿದ್ದು, ಬಿಜೆಪಿ ಪಕ್ಷ ರೈತರ ಕುರಿತಂತೆ ಗಮನ ಹರಿಸುತ್ತಿಲ್ಲ. ರೈತರಿಗೆ ಬೆಂಬಲವನ್ನು ನೀಡುತ್ತಿಲ್ಲ ಎಂದು ಹೇಳಿದರು.

ಅಲ್ಲದೆ, ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷ ಬಿಜೆಪಿ ಸಂಸತ್ತು ಸರಿಯಾಗಿ ಕಾರ್ಯನಿರ್ವಹಿಸಲು ಬಿಡುತ್ತಿಲ್ಲ ಎಂದು ಆರೋಪಿಸಿದರು.

ಈ ವೇಳೆ ವಿರೋಧ ಪಕ್ಷದ ನಾಯಕರು ಹಾಗೂ ಆಡಳಿತರೂಢ ಪಕ್ಷದ ನಾಯಕರ ನಡುವೆ ತೀವ್ರ ಮಾತಿನ ಚಕಮಕಿ ನಡೆದ ಹಿನ್ನಲೆಯಲ್ಲಿ ಕಲಾಪಕ್ಕೆ ತೀವ್ರ ಅಡ್ಡಿಯುಂಟಾಯಿತು. ಮಧ್ಯೆ ಪ್ರವೇಶ ಮಾಡಿದ ಸ್ಪೀಕರ್ ಪಿ.ಜೆ. ಕುರಿಯನ್ ಅವರು, ಸಂಸದರು ಸಮಾಧಾನದಿಂದ ಕುಳಿತುಕೊಳ್ಳುವಂತೆ ಮನವಿ ಮಾಡಿದರು. ಈ ವೇಳೆ ಆಜಾದ್ ಅವರ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

T20 World Cup 2026: ಸ್ಕಾಟ್ಲೆಂಡ್ ವಿರುದ್ಧ ನೇಪಾಳಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

SCROLL FOR NEXT