ಸಾಂದರ್ಭಿಕ ಚಿತ್ರ 
ದೇಶ

ನೋಟು ನಿಷೇಧ ಎಫೆಕ್ಟ್: ಸಂಬಳ ನೀಡದ ಕಾರ್ಖಾನೆ ಮೇಲೆ ಕಾರ್ಮಿಕರಿಂದ ದಾಂಧಲೆ

0 ಹಾಗೂ 1000 ರು ಮುಖಬೆಲೆಯ ನೋಟು ನಿಷೇಧದ ನಂತರ ಕಂಪನಿಯೊಂದು ವೇತನ ನೀಡದ ಹಿನ್ನೆಲೆಯಲ್ಲಿ ಮೂವರು ಕಾರ್ಮಿಕರು ಕಾರ್ಖಾನೆ ಮೇಲೆ ...

ಥಾಣೆ: 500 ಹಾಗೂ 1000 ರು ಮುಖಬೆಲೆಯ  ನೋಟು ನಿಷೇಧದ ನಂತರ ಕಂಪನಿಯೊಂದು ವೇತನ ನೀಡದ ಹಿನ್ನೆಲೆಯಲ್ಲಿ ಮೂವರು ಕಾರ್ಮಿಕರು ಕಾರ್ಖಾನೆ ಮೇಲೆ ದಾಂಧಲೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವಾಘ್ಲೆ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯ ಕಿಟಕಿಗಳನ್ನು ನಿನ್ನೆ ಬೆಳಗ್ಗೆ ಧ್ವಂಸಗೊಳಿಸಿದ್ದಾರೆ ಹಾಗೂ ನಿರ್ಮಾಣ ಕಾಮಗಾರಿಗಾಗಿ ತಂದಿದ್ದ ಟೈಲ್ಸ್ ಗಳನ್ನ ಒಡೆದು ಹಾಕಿದ್ದಾರೆ  ಎಂದು ಮೂವರು ಕಾರ್ಮಿಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಘಟನಾವಳಿಗಳು ಕಾರ್ಖಾನೆಯ ಸಿಸಿಟಿವಿಯಲ್ಲಿ ದಾಖಲಾಗಿದ್ದು ಅದರ ಆಧಾರದ ಮೇಲೆ ವಾಗ್ಲೆ ಎಸ್ಟೇಟ್ ಪೊಲೀಸ್ ಠಾಣೆಯಲ್ಲಿ ವಿವಿಧ ಕಾಯ್ದೆಗಳಡಿ ಕೇಸು ದಾಖಲಿಸಲಾಗಿದೆ.

ಪ್ರತಿ ತಿಂಗಳ 10 ನೇ ತಾರೀಖಿನಂದು ಕಾರ್ಖಾನೆ ಕಾರ್ಮಿಕರಿಗೆ ವೇತನ ನೀಡುತ್ತಿತ್ತು. ಆದರೆ ಅನಾಣ್ಯೀಕರಣದ ಹಿನ್ನೆಲೆಯಲ್ಲಿ ಈ ತಿಂಗಳ ಸಂಬಳವನ್ನು ಇನ್ನು ಪಾವತಿಸಿರಲಿಲ್ಲ, ಈ ಹಿನ್ನೆಲೆಯಲ್ಲಿ ದಾಂಧಲೆ ನಡೆದಿದೆ ಎನ್ನಲಾಗಿದೆ. ಆದರೆ ಇದುವರೆಗೂ ಪೊಲೀಸರು ಯಾರೊಬ್ಬರನ್ನು ಬಂಧಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT