ಸಾಂದರ್ಭಿಕ ಚಿತ್ರ 
ದೇಶ

ಹಿಮಾಚಲಪ್ರದೇಶ: ಐಎಸ್ಐಎಸ್ ನಂಟು ಆರೋಪದ ಮೇಲೆ ಬೆಂಗಳೂರ ವ್ಯಕ್ತಿ ಬಂಧನ

ಐಎಸ್ಐಎಸ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಬಂಜಾರ ಪ್ರದೇಶದಲ್ಲಿ...

ಶಿಮ್ಲಾ: ಐಎಸ್ಐಎಸ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಬಂಜಾರ ಪ್ರದೇಶದಲ್ಲಿ ಬೆಂಗಳೂರು ಮೂಲದ 23 ವರ್ಷದ ವ್ಯಕ್ತಿಯನ್ನು ಶನಿವಾರ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿ ಅಬೀದ್ ಖಾನ್ ಎಂದು ಗುರುತಿಸಲಾಗಿದ್ದು, ಕಳೆದ ನಾಲ್ಕೈದು ತಿಂಗಳಿಂದ ನಕಲಿ ಗುರುತಿನ ಮೇಲೆ ಚರ್ಚ್ ವೊಂದರಲ್ಲಿ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸರ ನೆರವಿನೊಂದಿಗೆ ಎನ್ಐಎ ಅಧಿಕಾರಿಗಳು ಅಬೀದ್ ಖಾನ್ ನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸ್ ಮಹಾ ನಿರ್ದೇಶಕ ಸಂಜಯ್ ಕುಮಾರ್ ಅವರು ತಿಳಿಸಿದ್ದಾರೆ.
ದೆಹಲಿಯಲ್ಲಿ ಬಂಧಿತರಾದ ಕೆಲವು ಶಂಕಿತ ಉಗ್ರರು ನೀಡಿದ ಮಾಹಿತಿ ಆಧಾರದ ಮೇಲೆ ಅಬೀದ್ ಖಾನ್ ನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ತಾನು ಐಎಸ್ಐಎಸ್ ಸಿದ್ಧಾಂತಗಳನ್ನು ಪ್ರೇರೇಪಿತನಾಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT