ಪ್ರಣಬ್ ಮುಖರ್ಜಿ 
ದೇಶ

ಭಾರತ ತಜಕಿಸ್ತಾನ ಅಫ್ಘಾನಿಸ್ತಾನಕ್ಕೆ ಸಹಾಯ ಮಾಡಲಿವೆ: ಪ್ರಣಬ್ ಮುಖರ್ಜಿ

ಭಾರತ ಹಾಗೂ ತಜಕಿಸ್ತಾನ ಅಫ್ಘಾನಿಸ್ತಾನದಲ್ಲಿ ಶಾಂತಿ ನೆಲೆಸುವುದಕ್ಕೆ ಸಹಾಯ ಮಾಡಲು ಬದ್ಧವಾಗಿವೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ.

ನವದೆಹಲಿ: ಭಾರತ ಹಾಗೂ ತಜಕಿಸ್ತಾನ ಅಫ್ಘಾನಿಸ್ತಾನದಲ್ಲಿ ಶಾಂತಿ ನೆಲೆಸುವುದಕ್ಕೆ ಸಹಾಯ ಮಾಡಲು ಬದ್ಧವಾಗಿವೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ. 
" ನಮ್ಮ ಸಮಾನ ಮಿತ್ರ ರಾಷ್ಟ್ರ ಅಪ್ಘಾನಿಸ್ತಾನದಲ್ಲಿ ಶಾಂತಿ ನೆಲೆಸುವಂತೆ ಮಾಡಲು ನಾವು ಬದ್ಧರಾಗಿದ್ದೇವೆ, ಅಲ್ಲಿನ ಜನತೆಯ ಕನಸು ನನಸು ಮಾಡಲು ಹಾಗೂ ಶಾಂತಿ ನೆಲೆಸುವಂತೆ ಮಾಡಲು ಸಹಕರಿಸುತ್ತೇವೆ" ಎಂದು ರಾಷ್ಟ್ರಪತಿಗಳು ಹೇಳಿದ್ದಾರೆ. 
ಭಾರತಕ್ಕೆ ಭೇಟಿ ನೀಡಿರುವ ತಜಕಿಸ್ತಾನದ ಅಧ್ಯಕ್ಷ ಎಮೋಮಲಿ ರಾಹ್‍ಮೋನ್ ಅವರಿಗೆ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗವಹಿಸಿ ಮಾತನಾಡಿದ ವೇಳೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಈ ಹೇಳಿಕೆ ನೀಡಿದ್ದಾರೆ.  ಭಾರತ-ತಜಕಿಸ್ತಾನ ದ್ವಿಪಕ್ಷೀಯ ಸಂಬಂಧದ 25 ನೇ ವಾರ್ಷಿಕೋತ್ಸವದ ಸಂದರ್ಭದಲ್ಲೇ ಎಮೋಮಲಿ ರಾಹ್‍ಮೋನ್ ಭಾರತಕ್ಕೆ ಭೇಟಿ ನೀಡಿದ್ದಾರೆ. 
ರಕ್ಷಣಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರವನ್ನು ಮತ್ತಷ್ಟು ಗಟ್ಟಿಗೊಳಿಸಲು ಹಾಗೂ ಭದ್ರತಾ ಸಹಕಾರವನ್ನು ಪರಿಣಾಮಕಾರಿಗೊಳಿಸಲು, ಭಯೋತ್ಪಾದನೆ ವಿರುದ್ಧ ಹೋರಾಡಲು ಎಮೋಮಲಿ ರಾಹ್ ಮೋನ್ ಭೇಟಿ ವೇಳೆ ಭಾರತ-ತಜಕಿಸ್ತಾನ ನಿರ್ಧರಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT