ಪಿಣರಾಯಿ ವಿಜಯನ್ 
ದೇಶ

ರಾಷ್ಟ್ರಗೀತೆ ವಿವಾದ: ನಿರ್ದೇಶಕ ಕಮಲ್ ಹೇಳಿಕೆಯನ್ನು ಬೆಂಬಲಿಸಿದ ಕೇರಳ ಸಿಎಂ

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡಬೇಕು ಎಂಬ ವಿಷಯ ಇದೀಗ ವಿವಾದಕ್ಕೆ ಕಾರಣವಾಗಿದ್ದು ಕೇರಳ ಚಲನಚಿತ್ರ ಅಕಾಡಮಿ ಅಧ್ಯಕ್ಷ ಹಾಗೂ ಮಲಯಾಳಂ...

ಕೋಳಿಕೋಡ್: ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡಬೇಕು ಎಂಬ ವಿಷಯ ಇದೀಗ ವಿವಾದಕ್ಕೆ ಕಾರಣವಾಗಿದ್ದು ಕೇರಳ ಚಲನಚಿತ್ರ ಅಕಾಡಮಿ ಅಧ್ಯಕ್ಷ ಹಾಗೂ ಮಲಯಾಳಂ ಚಲನಚಿತ್ರರಂಗದ ನಿರ್ದೇಶಕ ಕಮಲ್ ಹೇಳಿಕೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬೆಂಬಲಿಸಿದ್ದಾರೆ. 
ಸಂಘಪರಿವಾರದ ಜನರು ಕೋಮುವಾದ ಮತ್ತು ಅಸಹಿಷ್ಣುತೆಯನ್ನು ಕೆರಳಿಸಲು ರಾಷ್ಟ್ರಗೀತೆಯನ್ನು ಬಳಸಲಾಗುತ್ತಿದ್ದು ಕೇರಳದಲ್ಲಿ ಸಂಘಪರಿವಾರದವರ ಆಟ ನಡೆಯಲಾರದು ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ. 
ರಾಷ್ಟ್ರಗೀತೆ ಕುರಿತಂತೆ ಕಮಲ್ ಅವರ ಹೇಳಿಕೆಯಿಂದ ಕೆರಳಿಸಿರುವ ಸಂಘಪರಿವಾರದವರು ಕಮಲ್ ನಿವಾಸದೆದುರು ಪ್ರತಿಭಟನೆ ನಡೆಸುತ್ತಿದ್ದು ಸಂಘಪರಿವಾರ ಪ್ರತಿಭಟನೆ ಮೂಲಕ ವಿಷಯವನ್ನು ಕೋಮುವಾದೀಕರಣಗೊಳಿಸಿ ರಾಜಕೀಯ ಲಾಭಗಳಿಸಲು ಶ್ರಮಿಸುತ್ತಿದೆ ಎಂದರು. 
ರಾಷ್ಟ್ರಗೀತೆ ಕುರಿತಂತೆ ಕೇರಳದಲ್ಲಿ ಸಮಸ್ಯೆ ಸೃಷ್ಠಿಸುವವರನ್ನು ಸರ್ಕಾರ ಮಟ್ಟಹಾಕಲಿದೆ ಎಂದು ಪಿಣರಾಯಿ ವಿಜಯ್ ಎಚ್ಚರಿಕೆಯನ್ನು ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT