ಪಿಣರಾಯಿ ವಿಜಯನ್ 
ದೇಶ

ರಾಷ್ಟ್ರಗೀತೆ ವಿವಾದ: ನಿರ್ದೇಶಕ ಕಮಲ್ ಹೇಳಿಕೆಯನ್ನು ಬೆಂಬಲಿಸಿದ ಕೇರಳ ಸಿಎಂ

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡಬೇಕು ಎಂಬ ವಿಷಯ ಇದೀಗ ವಿವಾದಕ್ಕೆ ಕಾರಣವಾಗಿದ್ದು ಕೇರಳ ಚಲನಚಿತ್ರ ಅಕಾಡಮಿ ಅಧ್ಯಕ್ಷ ಹಾಗೂ ಮಲಯಾಳಂ...

ಕೋಳಿಕೋಡ್: ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡಬೇಕು ಎಂಬ ವಿಷಯ ಇದೀಗ ವಿವಾದಕ್ಕೆ ಕಾರಣವಾಗಿದ್ದು ಕೇರಳ ಚಲನಚಿತ್ರ ಅಕಾಡಮಿ ಅಧ್ಯಕ್ಷ ಹಾಗೂ ಮಲಯಾಳಂ ಚಲನಚಿತ್ರರಂಗದ ನಿರ್ದೇಶಕ ಕಮಲ್ ಹೇಳಿಕೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬೆಂಬಲಿಸಿದ್ದಾರೆ. 
ಸಂಘಪರಿವಾರದ ಜನರು ಕೋಮುವಾದ ಮತ್ತು ಅಸಹಿಷ್ಣುತೆಯನ್ನು ಕೆರಳಿಸಲು ರಾಷ್ಟ್ರಗೀತೆಯನ್ನು ಬಳಸಲಾಗುತ್ತಿದ್ದು ಕೇರಳದಲ್ಲಿ ಸಂಘಪರಿವಾರದವರ ಆಟ ನಡೆಯಲಾರದು ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ. 
ರಾಷ್ಟ್ರಗೀತೆ ಕುರಿತಂತೆ ಕಮಲ್ ಅವರ ಹೇಳಿಕೆಯಿಂದ ಕೆರಳಿಸಿರುವ ಸಂಘಪರಿವಾರದವರು ಕಮಲ್ ನಿವಾಸದೆದುರು ಪ್ರತಿಭಟನೆ ನಡೆಸುತ್ತಿದ್ದು ಸಂಘಪರಿವಾರ ಪ್ರತಿಭಟನೆ ಮೂಲಕ ವಿಷಯವನ್ನು ಕೋಮುವಾದೀಕರಣಗೊಳಿಸಿ ರಾಜಕೀಯ ಲಾಭಗಳಿಸಲು ಶ್ರಮಿಸುತ್ತಿದೆ ಎಂದರು. 
ರಾಷ್ಟ್ರಗೀತೆ ಕುರಿತಂತೆ ಕೇರಳದಲ್ಲಿ ಸಮಸ್ಯೆ ಸೃಷ್ಠಿಸುವವರನ್ನು ಸರ್ಕಾರ ಮಟ್ಟಹಾಕಲಿದೆ ಎಂದು ಪಿಣರಾಯಿ ವಿಜಯ್ ಎಚ್ಚರಿಕೆಯನ್ನು ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT