ಭೂ ಸೇನೆ ಮುಖ್ಯಸ್ಥ ಬಿಪಿನ್ ರಾವತ್ 
ದೇಶ

ಸೇವಾ ಹಿರಿತನ ವಿವಾದ: ರಾವತ್ ನೇಮಕ ಸಮರ್ಥಿಸಿಕೊಂಡ ಕೇಂದ್ರ

ಸೇನಾ ಮುಖ್ಯಸ್ಥರ ನೇಮಕ ಕುರಿತಂತೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಲೆ.ಜ. ಬಿಪಿನ್ ರಾವತ್ ಅವರನ್ನು ಭೂಸೇನೆಯ ಮುಖ್ಯಸ್ಥರನ್ನಾಗಿ ನೇಮಕ ಮಾಡಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ...

ನವದೆಹಲಿ: ಸೇನಾ ಮುಖ್ಯಸ್ಥರ ನೇಮಕ ಕುರಿತಂತೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಲೆ.ಜ. ಬಿಪಿನ್ ರಾವತ್ ಅವರನ್ನು ಭೂಸೇನೆಯ ಮುಖ್ಯಸ್ಥರನ್ನಾಗಿ ನೇಮಕ ಮಾಡಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.

ಸೇನೆಯಲ್ಲಿರುವ ಹಿರಿಯ ಅಧಿಕಾರಿಗಳನ್ನು ಕಡೆಗಣಿಸಿ ರಾವತ್ ಅವರನ್ನು ನೇಮಿಸಿರುವುದಕ್ಕೆ ವಿರೋಧ ಪಕ್ಷಗಳು ಟೀಕೆಗಳನ್ನು ವ್ಯಕ್ತಪಡಿಸಿದ್ದವು. ರಾವತ್ ಅವರನ್ನು ನೇಮಿಸಿರುವುದರ ಹಿಂದೆ ಏನಾದರೂ ಉದ್ದೇಶವಿದೆಯೇ? ಬಲವಾದ ಕಾರಣಗಳೇನಾದರೂ ಇವೇಯೇ ಎಂಬುದರ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ಪಷ್ಟನೆ ನೀಡಬೇಕಿದೆ ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದರು.

ಸರ್ಕಾರದ ಕ್ರವೇ ಪ್ರಶ್ನಾರ್ಹವಾಗಿದೆ ಎಂದು ಸಿಪಿಐ ಹೇಳಿತ್ತು. ಈ ಎಲ್ಲಾ ಆರೋಪಗಳಿಗೆ ತಿರುಗೇಟು ನೀಡಿದ್ದ ಬಿಜೆಪಿ ರಕ್ಷಣಾ ಇಲಾಖೆಯ ನೇಮಕಗಳಿಗೆ ಸಂಬಂಧಿಸಿದ ವಿಚಾರಗಳನ್ನು ರಾಜಕೀಯಗೊಳಿಸಬಾರದು ಎಂದು ಹೇಳಿತ್ತು.

ಎಲ್ಲಾ ಆರೋಪಗಳನ್ನು ತಿರಸ್ಕರಿಸಿದ್ದ ಕೇಂದ್ರ ಸರ್ಕಾರ ಇದೀಗ ಸ್ಪಷ್ಟನೆ ನೀಡಿದ್ದು, ರಾವತ್ ಅವರ ನೇಮಕಾತಿಯನ್ನು ಸಮರ್ಥಿಸಿಕೊಂಡಿದೆ. ಎಲ್ಲಾ ಅರ್ಹತೆಗಳನ್ನು ಪರಿಗಣಿಸಿಯೇ ಈ ನೇಮಕವನ್ನು ಮಾಡಲಾಗಿದೆ. ಪಶ್ಚಿಮ ಭಾಗದಲ್ಲಿ ನಡೆಯುತ್ತಿರುವ ಛಾಯಾ ಸಮರ, ಮುಂದುವರಿದಿರುವ ಉಗ್ರ ಕೃತ್ಯಗಳು, ಈಶಾನ್ಯಾದಲ್ಲಿ ಮುಂದುವರೆದಿರುವ ಸಮಸ್ಯೆಯಿಂದಾಗಿ ರಾವತ್ ಅವರನ್ನೇ ಮುಖ್ಯಸ್ಥರನ್ನಾಗಿ ಪರಿಗಣಿಸಲಾಗಿದೆ ಎಂದು ಪ್ರತಿಪಾದಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT