ಭೂ ಸೇನೆ ಮುಖ್ಯಸ್ಥ ಬಿಪಿನ್ ರಾವತ್ 
ದೇಶ

ಸೇವಾ ಹಿರಿತನ ವಿವಾದ: ರಾವತ್ ನೇಮಕ ಸಮರ್ಥಿಸಿಕೊಂಡ ಕೇಂದ್ರ

ಸೇನಾ ಮುಖ್ಯಸ್ಥರ ನೇಮಕ ಕುರಿತಂತೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಲೆ.ಜ. ಬಿಪಿನ್ ರಾವತ್ ಅವರನ್ನು ಭೂಸೇನೆಯ ಮುಖ್ಯಸ್ಥರನ್ನಾಗಿ ನೇಮಕ ಮಾಡಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ...

ನವದೆಹಲಿ: ಸೇನಾ ಮುಖ್ಯಸ್ಥರ ನೇಮಕ ಕುರಿತಂತೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಲೆ.ಜ. ಬಿಪಿನ್ ರಾವತ್ ಅವರನ್ನು ಭೂಸೇನೆಯ ಮುಖ್ಯಸ್ಥರನ್ನಾಗಿ ನೇಮಕ ಮಾಡಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.

ಸೇನೆಯಲ್ಲಿರುವ ಹಿರಿಯ ಅಧಿಕಾರಿಗಳನ್ನು ಕಡೆಗಣಿಸಿ ರಾವತ್ ಅವರನ್ನು ನೇಮಿಸಿರುವುದಕ್ಕೆ ವಿರೋಧ ಪಕ್ಷಗಳು ಟೀಕೆಗಳನ್ನು ವ್ಯಕ್ತಪಡಿಸಿದ್ದವು. ರಾವತ್ ಅವರನ್ನು ನೇಮಿಸಿರುವುದರ ಹಿಂದೆ ಏನಾದರೂ ಉದ್ದೇಶವಿದೆಯೇ? ಬಲವಾದ ಕಾರಣಗಳೇನಾದರೂ ಇವೇಯೇ ಎಂಬುದರ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ಪಷ್ಟನೆ ನೀಡಬೇಕಿದೆ ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದರು.

ಸರ್ಕಾರದ ಕ್ರವೇ ಪ್ರಶ್ನಾರ್ಹವಾಗಿದೆ ಎಂದು ಸಿಪಿಐ ಹೇಳಿತ್ತು. ಈ ಎಲ್ಲಾ ಆರೋಪಗಳಿಗೆ ತಿರುಗೇಟು ನೀಡಿದ್ದ ಬಿಜೆಪಿ ರಕ್ಷಣಾ ಇಲಾಖೆಯ ನೇಮಕಗಳಿಗೆ ಸಂಬಂಧಿಸಿದ ವಿಚಾರಗಳನ್ನು ರಾಜಕೀಯಗೊಳಿಸಬಾರದು ಎಂದು ಹೇಳಿತ್ತು.

ಎಲ್ಲಾ ಆರೋಪಗಳನ್ನು ತಿರಸ್ಕರಿಸಿದ್ದ ಕೇಂದ್ರ ಸರ್ಕಾರ ಇದೀಗ ಸ್ಪಷ್ಟನೆ ನೀಡಿದ್ದು, ರಾವತ್ ಅವರ ನೇಮಕಾತಿಯನ್ನು ಸಮರ್ಥಿಸಿಕೊಂಡಿದೆ. ಎಲ್ಲಾ ಅರ್ಹತೆಗಳನ್ನು ಪರಿಗಣಿಸಿಯೇ ಈ ನೇಮಕವನ್ನು ಮಾಡಲಾಗಿದೆ. ಪಶ್ಚಿಮ ಭಾಗದಲ್ಲಿ ನಡೆಯುತ್ತಿರುವ ಛಾಯಾ ಸಮರ, ಮುಂದುವರಿದಿರುವ ಉಗ್ರ ಕೃತ್ಯಗಳು, ಈಶಾನ್ಯಾದಲ್ಲಿ ಮುಂದುವರೆದಿರುವ ಸಮಸ್ಯೆಯಿಂದಾಗಿ ರಾವತ್ ಅವರನ್ನೇ ಮುಖ್ಯಸ್ಥರನ್ನಾಗಿ ಪರಿಗಣಿಸಲಾಗಿದೆ ಎಂದು ಪ್ರತಿಪಾದಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel