ದೆಹಲಿಯ ಪ್ರದೇಶವೊಂದರಲ್ಲಿ ಚಳಿಗೆ ಬಿಸಿ ಕಾಯಿಸಿಕೊಳ್ಳುತ್ತಿರುವ ಜನತೆ
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಇಂದು ದಟ್ಟ ಮಂಜು ಕವಿದಿರುವುದರಿಂದ 24 ರೈಲುಗಳು ನಿಗದಿತ ವೇಳೆಗಿಂತ ತಡವಾಗಿ ಹೊರಡಲಿವೆ. ಒಂದು ರೈಲಿನ ಸಂಚಾರ ರದ್ದಾಗಿದೆ.
ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6 ಅಂತಾರಾಷ್ಟ್ರೀಯ ಮತ್ತು 8 ದೇಶೀಯ ವಿಮಾನಗಳ ಹಾರಾಟ ಕೂಡ ವಿಳಂಬವಾಗಿದೆ.
ದೆಹಲಿಯಲ್ಲಿ ಕಳೆದೆರಡು ದಿನಗಳಿಂದ ತಾಪಮಾನ ಸಾಮಾನ್ಯಕ್ಕಿಂತ ಕನಿಷ್ಟ ಮಟ್ಟದಲ್ಲಿದೆ. ಈ ವರ್ಷದ ಚಳಿಗಾಲದಲ್ಲಿ ಇಲ್ಲಿಯವರೆಗಿನ ತಾಪಮಾನದಲ್ಲಿ ನಿನ್ನೆ ಅತ್ಯಂತ ಕನಿಷ್ಟ ಉಷ್ಣಾಂಶ ಕಂಡುಬಂದಿದ್ದು 7.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ಹವಾಮಾನ ಇಲಾಖೆಯ ಅಧಿಕಾರಿಗಳು, ಉತ್ತರ ಮತ್ತು ಪಶ್ಚಿಮ ದಿಕ್ಕುಗಳಿಂದ ಬೀಸುವ ಗಾಳಿಯಿಂದಾಗಿ ಇಷ್ಟೊಂದು ಕನಿಷ್ಠ ಉಷ್ಣಾಂಶವಿದೆ. ಮುಂದಿನ ಮೂರ್ನಾಲ್ಕು ದಿನಗಳವರೆಗೆ ಉಷ್ಣಾಂಶ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆಯಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos