JNU 
ದೇಶ

ಜೆಎನ್ ಯು ಕ್ಯಾಂಪಸ್ ನಲ್ಲಿ 600 ಪೊಲೀಸರಿಂದ ನಜೀಬ್ ಗಾಗಿ ಶೋಧ!

ಅಕ್ಟೋಬರ್ ತಿಂಗಳಿನಿಂದ ನಾಪತ್ತೆಯಾಗಿರುವ ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಗಾಗಿ ದೆಹಲಿ ಪೊಲೀಸರು ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಡಿ.19 ರಂದು ಶೋಧಕಾರ್ಯ ನಡೆಸಿದ್ದಾರೆ.

ನವದೆಹಲಿ: ಅಕ್ಟೋಬರ್ ತಿಂಗಳಿನಿಂದ ನಾಪತ್ತೆಯಾಗಿರುವ ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಗಾಗಿ ದೆಹಲಿ ಪೊಲೀಸರು ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಡಿ.19 ರಂದು ಶೋಧಕಾರ್ಯ ನಡೆಸಿದ್ದಾರೆ. 
ನಾಪತ್ತೆಯಾಗಿರುವ ನಜೀಬ್ ನ ಬಗ್ಗೆ ಸುಳಿವು ಪಡೆಯುವುದಕ್ಕಾಗಿ ಜೆಎನ್ ಯು ಕ್ಯಾಂಪಸ್ ನಲ್ಲಿ ಶೋಧಕಾರ್ಯಾಚರಣೆ ನಡೆಸಿರುವ 600 ಪೊಲೀಸರು, ಹಾಸ್ಟೆಲ್ ನಲ್ಲಿರುವ ಆತನ ಕೊಠಡಿ, ತರಗತಿ ಸೇರಿದಂತೆ ವಿವಿಯ ಎಲ್ಲಾ ಪ್ರದೇಶಗಳಲ್ಲೂ ತಪಾಸಣೆ ನಡೆಸಿದ್ದಾರೆ. " ನಜೀಬ್ ಅಹ್ಮದ್ ನ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುವುದಕ್ಕೆ ಈ ಶೋಧಕಾರ್ಯಾಚರಣೆ ನಡೆಸಲಾಗಿದೆ ಎಂದು ದೆಹಲಿಯ ಅಪರಾಧ ವಿಭಾಗದ ಜಂಟಿ ಆಯುಕ್ತ ರವೀಂದ್ರ ಯಾದವ್ ಹೇಳಿದ್ದಾರೆ. 
ಎಬಿವಿಪಿ ಕಾರ್ಯಕರ್ತರೊಂದಿಗೆ ಮಾರಾಮಾರಿ ನಡೆದ ಪ್ರಕರಣವಾದಾಗಿನಿಂದ ಜೆಎನ್ ಯು ವಿವಿ ವಿದ್ಯಾರ್ಥಿ ನಜೀಬ್ ನಾಪತ್ತೆಯಾಗಿದ್ದಾರೆ. ನಜೀಬ್ ನಾಪತ್ತೆ ಪ್ರಕರಣದಲ್ಲಿ ಶಾಮೀಲಾಗಿರುವ ಆರೋಪವನ್ನು ಎಬಿವಿಪಿ ನಿರಾಕರಿಸಿದೆ. ನಾಪತ್ತೆಯಾಗಿ 2 ತಿಂಗಳಾದರೂ ನಜೀಬ್ ಅಹ್ಮದ್ ಪತ್ತೆಯಾಗದೇ ಇರುವ ಹಿನ್ನೆಲೆಯಲ್ಲಿ ಆತನ ಬಗ್ಗೆ ಸುಳಿವು ನೀಡಿದವರಿಗೆ 5 ಲಕ್ಷದಿಂದ 10 ಲಕ್ಷದ ವರೆಗೆ ಪೊಲೀಸರು ಬಹುಮಾನ ಘೋಷಿಸಿದ್ದಾರೆ. 
ನಜೀಬ್ ಅಹ್ಮದ್ ನಪತ್ತೆ ಪ್ರಕರಣದ ಬಗ್ಗೆ ವಿಚಾರಣೆ ನಡಿಸಿದ್ದ ದೆಹಲಿ ಹೈಕೋರ್ಟ್ ಜೆಎನ್ ಯು ಕ್ಯಾಂಪಸ್ ನ್ನು ತಪಾಸಣೆ ನಡೆಸುವಂತೆ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT