ಸಂಗ್ರಹ ಚಿತ್ರ 
ದೇಶ

ರಾಷ್ಟ್ರಗೀತೆ ವಿವಾದ: ಕೇರಳ ಲೇಖಕನ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲು

ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂಬ ಆರೋಪ ಮೇರೆಗೆ ಮಲಯಾಳಂ ಲೇಖಕ ಹಾಗೂ ನಾಟಕ ಕಲಾವಿದ ಕಮಲ್ ಸಿ ಚಲಾವ ಅಲಿಯಾಸ್ ಕಮಲ್ಸಿ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಾಗಿದೆ...

ತಿರುವನಂತಪುರ: ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂಬ ಆರೋಪ ಮೇರೆಗೆ ಮಲಯಾಳಂ ಲೇಖಕ ಹಾಗೂ ನಾಟಕ ಕಲಾವಿದ ಕಮಲ್ ಸಿ ಚಲಾವ ಅಲಿಯಾಸ್ ಕಮಲ್ಸಿ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಾಗಿದೆ ಎಂದು ಸೋಮವಾಲ ತಿಳಿದುಬಂದಿದೆ.

ನಿನ್ನಯಷ್ಟೇ ಕಮಲ್ ಅವರು ಫೇಸ್ ಬುಕ್ ನಲ್ಲಿ ಪೋಸ್ಟ್ ವೊಂದನ್ನು ಹಾಕಿದ್ದರು. ತಮ್ಮ ಫೇಸ್ ಬುಕ್ ವಾಲ್ ನಲ್ಲಿ ಕಮಲ್ ಅವರು, 'ಸ್ಮಶಾನಂಗಳುದೆ ನೋಟ್ ಪುಸ್ತಕಂ' ಕಾದಂಬರಿಯ ಕೆಲ ಅಂಶಗಳನ್ನು ಹಾಕಿದ್ದರು. ಇದಕ್ಕೆ ಬಿಜೆಪಿಯ ಯುವ ಮೋರ್ಚಾ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಕಮಲ್ ಅವರು ರಾಷ್ಟ್ರಗೀತೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ದೂರನ್ನು ದಾಖಲಿಸಿತ್ತು.

ಈ ದೂರನ್ನು ಪರಿಗಣಿಸಿರುವ ಕೇರಳದ ನಡಕ್ಕಾವು ಪೊಲೀಸರು, ಲೇಖಕ ಕಮಲ್ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿಕೊಂಡು ನಿನ್ನೆ ಲೇಖಕನ್ನು ಬಂಧನಕ್ಕೊಳಪಡಿಸಿದೆ ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT