ಜಯಲಲಿತಾ ಮತ್ತು ಶಶಿಕಲಾ 
ದೇಶ

ಜಯಲಲಿತಾ ಉತ್ತರಾಧಿಕಾರಿಯಾಗಿರುವ ಶಶಿಕಲಾ ಸಿಎಂ ಆಗಬೇಕು: ಕಂದಾಯ ಸಚಿವ

ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಏಕೈಕ ಉತ್ತರಾಧಿಕಾರಿಯಾಗಿರುವ ಶಶಿಕಲಾ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಸ್ಥಾನದ ಜೊತೆಗೆ, ಸಿಎಂ ಆಗಿ ಅಧಿಕಾರ....

ಚೆನ್ನೈ: ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಏಕೈಕ ಉತ್ತರಾಧಿಕಾರಿಯಾಗಿರುವ ಶಶಿಕಲಾ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಸ್ಥಾನದ ಜೊತೆಗೆ, ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಬೇಕು ಎಂದು ತಮಿಳುನಾಡು ಕಂದಾಯ ಸಚಿವ ಆರ್ ಬಿ ಉದಯ್ ಕುಮಾರ್ ಒತ್ತಾಯಿಸಿದ್ದಾರೆ.

ಜಯಲಲಿತಾ ಅವರಿಗೆ ತುಂಬಾ ಬೇಕಾದವರಲ್ಲಿ ಶಶಿಕಲಾ ಒಬ್ಬರು, ಪಕ್ಷದ ಜವಾಬ್ದಾರಿ ಜೊತೆಗೆ ರಾಜ್ಯದ ಹಿತಾಸಕ್ತಿ ಕಾಪಾಡುವುದು ಕೂಡ ಮುಖ್ಯವಾಗಿದೆ, ಜಯಲಲಿತಾ ಅವರಂತೆ ಪಕ್ಷ ಮತ್ತು ರಾಜ್ಯದ ಚುಕ್ಕಾಣಿ ಹಿಡಿಯುವುದು ಶಶಿಕಲಾ ಅವರಿಗೆ ಮಾತ್ರ ಸಾಧ್ಯ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಸಚಿವರಾದ ಕದಂಬೂರ್ ರಾಜು ಮತ್ತು ಎಸ್ ರಾಮಚಂದ್ರನ್ ಹಲವು ಜಿಲ್ಲೆಗಳ ಎಐಎಡಿಎಂಕೆ ಅಧ್ಯಕ್ಷರು ಹಾಗೂ ಕಾರ್ಯಕರ್ತರನ್ನು ವಯಕ್ತಿಕವಾಗಿ ಭೇಟಿ ಮಾಡಿ ಅವರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಶಶಿಕಲಾ ಅವರೇ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಬೇಕು ಎಂಬುದು ಎಲ್ಲ ಕಾರ್ಯಕರ್ತರ ಒಮ್ಮತದ ಆಶಯವಾಗಿದೆ ಎಂದು ಉದಯ್ ಕುಮಾರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಶಶಿಕಲಾ ಅವರನ್ನು ಸಿಎಂ ಮಾಡುವ ಸಲುವಾಗಿ ಪನ್ನೀರ್ ಸೆಲ್ವಂ ವಿರುದ್ಧ ದಂಗೆ ಏಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪನ್ನೀರ್ ಸೆಲ್ವಂ ತುಂಬಾ ವಿದೇಯ ವ್ಯಕ್ತಿ, ನಾವೆಲ್ಲರೂ ಪಕ್ಷಕ್ಕೆ ನಿಷ್ಠರಾಗಿದ್ದೇವೆ, ಶಶಿಕಲಾ ಅವರೇ ಸಿಎಂ ಆಗಬೇಕು ಎಂಬುದು ಪನ್ನೀರ್ ಸೆಲ್ವಂ ಅವರ ಮನವಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ದಶಕಗಳಿಂದ ಶಶಿಕಲಾ ಅವರು ಜಯಲಲಿತಾ ಅವರ ಜೊತೆಗಿದ್ದಾರೆ, ಶಶಿಕಲಾ ಅವರನ್ನು ಜಯಾ ಉತ್ತರಾಧಿಕಾರಿ ಎಂದು ಬಿಂಬಿಸಲಾಗಿದೆ. ಹೀಗಾಗಿ ಅವರೇ ತಮಿಳುನಾಡು ಸಿಎಂ ಆಗಬೇಕು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT