ಅಸಾವುದ್ದೀನ್ ಓವೈಸಿ 
ದೇಶ

ಮುಸ್ಲಿಮೇತರ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಎನ್ಐಎ ತನಿಖೆ ವಿಳಂಬ: ಅಸಾವುದ್ದೀನ್ ಒವೈಸಿ

ಸಂಸದ ಅಸಾವುದ್ದೀನ್ ಓವೈಸಿ ಮುಸ್ಲಿಮೇತರ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಎನ್ಐಎ ತನಿಖೆ ವಿಳಂಬವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿ: ದಿಲ್ ಸುಖ್ ನಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ಯಾಸೀನ್ ಭಟ್ಕಳ್ ಸೇರಿ ಐವರಿಗೆ ಕೋರ್ಟ್ ಗಲ್ಲು ಶಿಕ್ಷೆ ಪ್ರಕಟಿಸಿದ ಬೆನ್ನಲ್ಲೇ ಸಂಸದ ಅಸಾವುದ್ದೀನ್ ಓವೈಸಿ ಮುಸ್ಲಿಮೇತರ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಎನ್ಐಎ ತನಿಖೆ ವಿಳಂಬವಾಗುತ್ತಿದೆ ಎಂದು ಆರೋಪಿಸಿದ್ದಾರೆ. 
ಸರಣಿ ಟ್ವೀಟ್ ಮಾಡಿರುವ ಅಸಾವುದ್ದೀನ್ ಓವೈಸಿ, 2013ರ ದಿಲ್ ಸುಖ್ ನಗರ ಸ್ಫೋಟ ಪ್ರಕರಣ ಆರೋಪಿಗಳಿನ್ನು ಅಪರಾಧಿಗಳನ್ನಾಗಿ ಘೋಷಿಸಲಾಗುತ್ತದೆ. ಮೆಕ್ಕಾ ಮಸ್ಜೀದ್ ಸ್ಫೋಟ, ಅಜ್ಮೀರ್ ದರ್ಗಾ ಸ್ಫೋಟ, ಮಾಲೇಗಾಂವ್ ಸ್ಫೋಟ ಪ್ರಕರಣಗಳಲ್ಲಿ ಎನ್ಐಎ ಅಪರಾಧಿಗಳನ್ನು ಘೋಷಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. 
ದಿಲ್ ಸುಖ್ ನಗರ ಸ್ಫೋಟ ಪ್ರಕರಣದಲ್ಲಿ ತೋರಿದ ಪ್ರಗತಿ, ಅವಸರವನ್ನು ಅಜ್ಮೀರ್ ದರ್ಗಾ ಸ್ಫೋಟ, ಮಾಲೇಗಾಂವ್ ಸ್ಫೋಟ, ಬಾಬ್ರಿ ಮಸೀದಿ ಧ್ವಂಸ ಪ್ರಕರಣಗಳಲ್ಲಿ ಏಕೆ ತೋರುವುದಿಲ್ಲ, ದಿಲ್ ಸಿಖ್ ನಗರ ಸ್ಫೋಟ ಪ್ರಕರಣದ ಆರೋಪಿಗಳಿಗೆ 3 ವರ್ಷಗಳಲ್ಲಿ ಶಿಕ್ಷೆ ಪ್ರಕಟವಾಗುತ್ತದೆ. ಆದರೆ ಮುಸ್ಲಿಮೇತರ ಪ್ರಕರಣಗಳ ಇತ್ಯರ್ಥ ವಿಳಂಬವಾಗುತ್ತಿವೆ ಎಲ್ಲಾ ಅಪರಾಧಿಗಳನ್ನು ನಿರಪರಾಧಿಗಳೆಂದು ಘೋಷಿಸಿದರೂ ಅಚ್ಚರಿ ಇಲ್ಲ ಎಂದು ಅಸಾವುದ್ದೀನ್ ಓವೈಸಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT