ಸ್ಮೃತಿ ಇರಾನಿ 
ದೇಶ

ಸ್ಮೃತಿ ಇರಾನಿ'ಯವರೇ, ಕರ್ನಾಟಕ ಸಹ ಭಾರತದ ಒಂದು ಭಾಗ: ಶಾಸಕ ಸಿ.ಟಿ ರವಿ ಟ್ವೀಟ್

ಕರ್ನಾಟಕ ಕೂಡ ಭಾರತದ ಒಂದು ರಾಜ್ಯ ಎಂದು ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ಅವರಿಗೆ ರಾಜ್ಯ ಬಿಜೆಪಿ ಶಾಸಕರೊಬ್ಬರು ನೆನಪು ಮಾಡಿಕೊಟ್ಟಿದ್ದಾರೆ.

ನವದೆಹಲಿ: ಕರ್ನಾಟಕ ಕೂಡ ಭಾರತದ ಒಂದು ರಾಜ್ಯ ಎಂದು ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ಅವರಿಗೆ ರಾಜ್ಯ ಬಿಜೆಪಿ ಶಾಸಕರೊಬ್ಬರು ನೆನಪು ಮಾಡಿಕೊಟ್ಟಿದ್ದಾರೆ.

ನೇಕಾರರಿಗೆ ಅನುಕೂಲವಾಗಲೆಂಬ ದೃಷ್ಟಿಯಿಂದ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ, 'ಇ ಧಾಗ' ಎಂಬ ಆ್ಯಪ್ ಉದ್ಘಾಟಿಸಿದರು. ಈ ಆ್ಯಪ್ ಹಿಂದಿ, ಇಂಗ್ಲಿಷ್, ಮತ್ತು ತೆಲುಗು ಭಾಷೆಯಲ್ಲಿ ಲಭ್ಯವಿದೆ. ಶೀಘ್ರವೇ ತಮಿಳು, ಬೆಂಗಾಲಿ, ಒರಿಯಾ ಮತ್ತು ಉರ್ದು ಹಾಗೂ ಅಸ್ಸಾಮೀ ಭಾಷೆಯಲ್ಲಿ ಸಿಗಲಿದೆ ಎಂದು ಸ್ಮೃತಿ ಇರಾನಿ ಹೇಳಿದ್ದರು.

ಆದರೆ ಇರಾನಿ ಕನ್ನಡ ಭಾಷೆಯಲ್ಲಿ ಆ್ಯಪ್ ಇಲ್ಲದುದರ ಬಗ್ಗೆ ಬಿಜೆಪಿ ಶಾಸಕ ಸಿಟಿ ರವಿ ಟ್ವೀಟ್ ಮಾಡಿದ್ದಾರೆ. ಸ್ಮೃತಿ ಇರಾನಿ ಅವರೇ, ಕರ್ನಾಟಕ ಕೂಡ ಭಾರತದ ಒಂದು ಭಾಗ, ಹೀಗಾಗಿ ಇ ಧಾಗ ಆ್ಯಪ್ ಅನ್ನು ಕನ್ನಡದಲ್ಲಿ ಶೀಘ್ರವೇ ಪರಿಚಯಿಸಿ, ಜೊತೆಗೆ ಅಡ್ವಾನ್ಸ್ ಥ್ಯಾಂಕ್ಸ್ ಎಂದು ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT