ಕೇಂದ್ರ ಸಚಿವ ಅರುಣ್ ಜೇಟ್ಲಿ 
ದೇಶ

ರೈಲ್ವೆ ಸೇವೆಗಳಿಗೆ ಪ್ರಯಾಣಿಕರಿಗೆ ದರ ವಿಧಿಸಬೇಕು: ಅರುಣ್ ಜೇಟ್ಲಿ

ಕೇಂದ್ರ ಸಾಮಾನ್ಯ ಮತ್ತು ರೈಲ್ವೆ ಬಜೆಟ್ ಮಂಡನೆಗೆ ಮುನ್ನ ಪ್ರಯಾಣಿಕರಿಗೆ ಮೂಲ ಸೇವೆಗಳಿಗೆ ದರ ...

ನವದೆಹಲಿ: ಕೇಂದ್ರ ಸಾಮಾನ್ಯ ಮತ್ತು ರೈಲ್ವೆ ಬಜೆಟ್ ಮಂಡನೆಗೆ ಮುನ್ನ  ಪ್ರಯಾಣಿಕರಿಗೆ ಮೂಲ ಸೇವೆಗಳಿಗೆ ದರ ವಿಧಿಸುವ ಸೂಚನೆ ನೀಡಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ರೈಲ್ವೆ ಪ್ರಯಾಣಿಕರು ತಾವು ಪಡೆಯುವ ಸೇವೆಗಳಿಗೆ ಹಣ ನೀಡಬೇಕಾಗುತ್ತದೆ ಎಂದರು.
ವರ್ಷದಿಂದ ವರ್ಷಕ್ಕೆ ರೈಲ್ವೆ ಬಜೆಟ್ ನ ಯಶಸ್ಸನ್ನು ಗ್ರಾಹಕರಿಗೆ ನೀಡುವ ಸಬ್ಸಿಡಿ ಮತ್ತು ಅನೇಕ ಜನಪ್ರಿಯ ಘೋಷಣೆಗಳನ್ನು ಮಾಡುವಲ್ಲಿ ಅಳೆಯಲಾಗುತ್ತದೆ ಎಂದು ಹೇಳಿದರು.
ಭಾರತೀಯ ಕೈಗಾರಿಕಾ ಒಕ್ಕೂಟ ಆಯೋಜಿಸಿದ್ದ ರೈಲ್ವೆಯ ಲೆಕ್ಕಪರಿಶೋಧಕ ಸುಧಾರಣೆಗಳ ಕುರಿತ ಸಮ್ಮೇಳನದಲ್ಲಿ ಮಾತನಾಡಿದ ಅವರು, ರೈಲ್ವೆ ಇಲಾಖೆಯ ಕಾರ್ಯನಿರ್ವಹಣೆ ಮತ್ತು ಆಂತರಿಕ ನಿರ್ವಹಣೆ ವ್ಯವಸ್ಥೆ ಸುಧಾರಣೆಯಾಗದಿದ್ದರೆ ಭೂ ಸಾರಿಗೆ ಮತ್ತು ವಿಮಾನಯಾನ, ಕಾರ್ಗೊ ಸಂಚಾರಗಳಿಂದ ತೀವ್ರ ಸ್ಪರ್ಧೆ ಎದುರಿಸಿ ನಷ್ಟ ಅನುಭವಿಸಬೇಕಾಗುತ್ತದೆ ಎಂದರು.
ಇಂಧನ ಮತ್ತು ಹೆದ್ದಾರಿ ವಲಯಗಳು ಗ್ರಾಹಕರಿಂದ ಸೇವಾ ಶುಲ್ಕ ಪಡೆಯಲು ಆರಂಭಿಸಿದಾಗ ಆ ವಲಯಗಳು ಲಾಭದತ್ತ ಸಾಗಿದವು. ರೈಲ್ವೆ ವಲಯಗಳಲ್ಲಿ ಸಹ ಗ್ರಾಹಕರಿಗೆ ನೀಡುವ ಸೇವೆಗಳಿಗೆ ಶುಲ್ಕ  ವಿಧಿಸಿದಾಗ ಸುಧಾರಣೆಯಾಗಬಹುದು ಎಂದರು.
ಈ ಬಾರಿ ಕೇಂದ್ರದ ಸಾಮಾನ್ಯ ಬಜೆಟ್ ಜೊತೆಗೆ ರೈಲ್ವೆ ಬಜೆಟ್ ಕೂಡ ಮಂಡನೆಯಾಗಲಿದೆ. ಕಳೆದ ಸೆಪ್ಟೆಂಬರ್ ನಲ್ಲಿ 92 ವರ್ಷಗಳ ರೈಲ್ವೆ ಬಜೆಟ್ ಮಂಡನೆಗೆ ಕೊನೆ ಹಾಡಿರುವ ಕೇಂದ್ರ ಸರ್ಕಾರ ಮುಂದಿನ ವರ್ಷ ಫೆಬ್ರವರಿ 1ರಂದು ಸಾಮಾನ್ಯ ಬಜೆಟ್ ಮತ್ತು ರೈಲ್ವೆ ಬಜೆಟ್ ನ್ನು ಒಟ್ಟಿಗೆ ಮಂಡಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT