ಕೇಂದ್ರ ಸಚಿವ ಅರುಣ್ ಜೇಟ್ಲಿ 
ದೇಶ

ರೈಲ್ವೆ ಸೇವೆಗಳಿಗೆ ಪ್ರಯಾಣಿಕರಿಗೆ ದರ ವಿಧಿಸಬೇಕು: ಅರುಣ್ ಜೇಟ್ಲಿ

ಕೇಂದ್ರ ಸಾಮಾನ್ಯ ಮತ್ತು ರೈಲ್ವೆ ಬಜೆಟ್ ಮಂಡನೆಗೆ ಮುನ್ನ ಪ್ರಯಾಣಿಕರಿಗೆ ಮೂಲ ಸೇವೆಗಳಿಗೆ ದರ ...

ನವದೆಹಲಿ: ಕೇಂದ್ರ ಸಾಮಾನ್ಯ ಮತ್ತು ರೈಲ್ವೆ ಬಜೆಟ್ ಮಂಡನೆಗೆ ಮುನ್ನ  ಪ್ರಯಾಣಿಕರಿಗೆ ಮೂಲ ಸೇವೆಗಳಿಗೆ ದರ ವಿಧಿಸುವ ಸೂಚನೆ ನೀಡಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ರೈಲ್ವೆ ಪ್ರಯಾಣಿಕರು ತಾವು ಪಡೆಯುವ ಸೇವೆಗಳಿಗೆ ಹಣ ನೀಡಬೇಕಾಗುತ್ತದೆ ಎಂದರು.
ವರ್ಷದಿಂದ ವರ್ಷಕ್ಕೆ ರೈಲ್ವೆ ಬಜೆಟ್ ನ ಯಶಸ್ಸನ್ನು ಗ್ರಾಹಕರಿಗೆ ನೀಡುವ ಸಬ್ಸಿಡಿ ಮತ್ತು ಅನೇಕ ಜನಪ್ರಿಯ ಘೋಷಣೆಗಳನ್ನು ಮಾಡುವಲ್ಲಿ ಅಳೆಯಲಾಗುತ್ತದೆ ಎಂದು ಹೇಳಿದರು.
ಭಾರತೀಯ ಕೈಗಾರಿಕಾ ಒಕ್ಕೂಟ ಆಯೋಜಿಸಿದ್ದ ರೈಲ್ವೆಯ ಲೆಕ್ಕಪರಿಶೋಧಕ ಸುಧಾರಣೆಗಳ ಕುರಿತ ಸಮ್ಮೇಳನದಲ್ಲಿ ಮಾತನಾಡಿದ ಅವರು, ರೈಲ್ವೆ ಇಲಾಖೆಯ ಕಾರ್ಯನಿರ್ವಹಣೆ ಮತ್ತು ಆಂತರಿಕ ನಿರ್ವಹಣೆ ವ್ಯವಸ್ಥೆ ಸುಧಾರಣೆಯಾಗದಿದ್ದರೆ ಭೂ ಸಾರಿಗೆ ಮತ್ತು ವಿಮಾನಯಾನ, ಕಾರ್ಗೊ ಸಂಚಾರಗಳಿಂದ ತೀವ್ರ ಸ್ಪರ್ಧೆ ಎದುರಿಸಿ ನಷ್ಟ ಅನುಭವಿಸಬೇಕಾಗುತ್ತದೆ ಎಂದರು.
ಇಂಧನ ಮತ್ತು ಹೆದ್ದಾರಿ ವಲಯಗಳು ಗ್ರಾಹಕರಿಂದ ಸೇವಾ ಶುಲ್ಕ ಪಡೆಯಲು ಆರಂಭಿಸಿದಾಗ ಆ ವಲಯಗಳು ಲಾಭದತ್ತ ಸಾಗಿದವು. ರೈಲ್ವೆ ವಲಯಗಳಲ್ಲಿ ಸಹ ಗ್ರಾಹಕರಿಗೆ ನೀಡುವ ಸೇವೆಗಳಿಗೆ ಶುಲ್ಕ  ವಿಧಿಸಿದಾಗ ಸುಧಾರಣೆಯಾಗಬಹುದು ಎಂದರು.
ಈ ಬಾರಿ ಕೇಂದ್ರದ ಸಾಮಾನ್ಯ ಬಜೆಟ್ ಜೊತೆಗೆ ರೈಲ್ವೆ ಬಜೆಟ್ ಕೂಡ ಮಂಡನೆಯಾಗಲಿದೆ. ಕಳೆದ ಸೆಪ್ಟೆಂಬರ್ ನಲ್ಲಿ 92 ವರ್ಷಗಳ ರೈಲ್ವೆ ಬಜೆಟ್ ಮಂಡನೆಗೆ ಕೊನೆ ಹಾಡಿರುವ ಕೇಂದ್ರ ಸರ್ಕಾರ ಮುಂದಿನ ವರ್ಷ ಫೆಬ್ರವರಿ 1ರಂದು ಸಾಮಾನ್ಯ ಬಜೆಟ್ ಮತ್ತು ರೈಲ್ವೆ ಬಜೆಟ್ ನ್ನು ಒಟ್ಟಿಗೆ ಮಂಡಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT