ಶಸಿಕಲಾ 
ದೇಶ

ಜಯಲಲಿತಾಗೆ ಶ್ರದ್ದಾಂಜಲಿ ಸಲ್ಲಿಸಿದ, ರಾಷ್ಟ್ರಪತಿ, ಮೋದಿ ಹಾಗೂ ರಾಹುಲ್ ಗೆ ಧನ್ಯವಾದ ಹೇಳಿದ ಶಸಿಕಲಾ

ಇತ್ತೀಚೆಗೆ ನಿಧನರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಡಿಸೆಂಬರ್ 6ರಂದು ಚೆನ್ನೈ ಗೆ ಬಂದು ಶ್ರದ್ದಾಂಜಲಿ ಸಲ್ಲಿಸಿದ ರಾಷ್ಟ್ರಪತಿ ಪ್ರಣಬ್ ...

ಚೆನ್ನೈ: ಇತ್ತೀಚೆಗೆ ನಿಧನರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಡಿಸೆಂಬರ್ 6ರಂದು ಚೆನ್ನೈ ಗೆ ಬಂದು ಶ್ರದ್ದಾಂಜಲಿ ಸಲ್ಲಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಜಯಾ ಆಪ್ತೆ ಶಸಿಕಲಾ ಧನ್ಯವಾದ ತಿಳಿಸಿದ್ದಾರೆ.

ಚೆನ್ನೈ ಗೆ ಬಂದು ನೀವು ಅಗಲಿದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಿಎಂ ಜಯಲಲಿತಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದೀರಿ, ನನಗೆ ವಯಕ್ತಿಕವಾಗಿ ಸಮಾಧಾನ ಹೇಳಿದ್ದಾರೆ. ಚೆನ್ನೈ ಗೆ ಬರಲು ನಿಮಗೆ ವಿಮಾನದಿಂದಾಗಿ ಸ್ವಲ್ಪ ತಡವಾಯಿತು, ನಿಮ್ಮ ಮಾತುಗಳು ನನಗೆ ಮತ್ತು ಲಕ್ಷಾಂತರ ತಮಿಳಿಗರಿಗೆ ಸಮಾಧಾನ ತಂದಿತು. ಇಲ್ಲಿಗೆ ಆಗಮಿಸಿದ್ದ ನಿಮಗೆ ನನ್ನ ಪ್ರಾಮಾಣಿಕ ಧನ್ಯವಾದಗಳನ್ನು ತಿಳಿಸಿ, ಶಸಿಕಲಾ ರಾಷ್ಟ್ಪಪತಿ ಅವರಿಗೆ ಪತ್ರ ಬರೆದಿದ್ದಾರೆ.

ಜೊತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದು. ಚೆನ್ನೈಗೆ ಬಂದು ಜಯಲಲಿತಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದು ನಿಮ್ಮ ಅಪ್ರತಿಮ ಗುಣವನ್ನು ತೋರಿಸುತ್ತದೆ. ನಿಮ್ಮ ಭೇಟಿ ನನಗೆ ಶಕ್ತಿ ತಂದಿತು ಎಂದು ತಿಳಿಸಿದ್ದಾರೆ.

ನಿಮ್ಮ ಕರುಣೆಯ ಮಾತುಗಳು ನನಗೆ ಮತ್ತು ತಮಿಳು ನಾಡು ಜನೆತೆಗೆ ದೊಡ್ಡ ಸಮಾಧಾನ ತಂದಿದೆ ಎಂದು ರಾಹುಲ್ ಗಾಂಧಿ ಅವರಿಗೂ ಶಸಿಕಲಾ ಪತ್ರ ಬರೆದು ಧನ್ಯವಾದ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?