ಶಸಿಕಲಾ 
ದೇಶ

ಜಯಲಲಿತಾಗೆ ಶ್ರದ್ದಾಂಜಲಿ ಸಲ್ಲಿಸಿದ, ರಾಷ್ಟ್ರಪತಿ, ಮೋದಿ ಹಾಗೂ ರಾಹುಲ್ ಗೆ ಧನ್ಯವಾದ ಹೇಳಿದ ಶಸಿಕಲಾ

ಇತ್ತೀಚೆಗೆ ನಿಧನರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಡಿಸೆಂಬರ್ 6ರಂದು ಚೆನ್ನೈ ಗೆ ಬಂದು ಶ್ರದ್ದಾಂಜಲಿ ಸಲ್ಲಿಸಿದ ರಾಷ್ಟ್ರಪತಿ ಪ್ರಣಬ್ ...

ಚೆನ್ನೈ: ಇತ್ತೀಚೆಗೆ ನಿಧನರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಡಿಸೆಂಬರ್ 6ರಂದು ಚೆನ್ನೈ ಗೆ ಬಂದು ಶ್ರದ್ದಾಂಜಲಿ ಸಲ್ಲಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಜಯಾ ಆಪ್ತೆ ಶಸಿಕಲಾ ಧನ್ಯವಾದ ತಿಳಿಸಿದ್ದಾರೆ.

ಚೆನ್ನೈ ಗೆ ಬಂದು ನೀವು ಅಗಲಿದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಿಎಂ ಜಯಲಲಿತಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದೀರಿ, ನನಗೆ ವಯಕ್ತಿಕವಾಗಿ ಸಮಾಧಾನ ಹೇಳಿದ್ದಾರೆ. ಚೆನ್ನೈ ಗೆ ಬರಲು ನಿಮಗೆ ವಿಮಾನದಿಂದಾಗಿ ಸ್ವಲ್ಪ ತಡವಾಯಿತು, ನಿಮ್ಮ ಮಾತುಗಳು ನನಗೆ ಮತ್ತು ಲಕ್ಷಾಂತರ ತಮಿಳಿಗರಿಗೆ ಸಮಾಧಾನ ತಂದಿತು. ಇಲ್ಲಿಗೆ ಆಗಮಿಸಿದ್ದ ನಿಮಗೆ ನನ್ನ ಪ್ರಾಮಾಣಿಕ ಧನ್ಯವಾದಗಳನ್ನು ತಿಳಿಸಿ, ಶಸಿಕಲಾ ರಾಷ್ಟ್ಪಪತಿ ಅವರಿಗೆ ಪತ್ರ ಬರೆದಿದ್ದಾರೆ.

ಜೊತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದು. ಚೆನ್ನೈಗೆ ಬಂದು ಜಯಲಲಿತಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದು ನಿಮ್ಮ ಅಪ್ರತಿಮ ಗುಣವನ್ನು ತೋರಿಸುತ್ತದೆ. ನಿಮ್ಮ ಭೇಟಿ ನನಗೆ ಶಕ್ತಿ ತಂದಿತು ಎಂದು ತಿಳಿಸಿದ್ದಾರೆ.

ನಿಮ್ಮ ಕರುಣೆಯ ಮಾತುಗಳು ನನಗೆ ಮತ್ತು ತಮಿಳು ನಾಡು ಜನೆತೆಗೆ ದೊಡ್ಡ ಸಮಾಧಾನ ತಂದಿದೆ ಎಂದು ರಾಹುಲ್ ಗಾಂಧಿ ಅವರಿಗೂ ಶಸಿಕಲಾ ಪತ್ರ ಬರೆದು ಧನ್ಯವಾದ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT