ರಾಹುಲ್ ಗಾಂಧಿ 
ದೇಶ

ಮೋದಿ ಸಹರಾ ಕಂಪೆನಿಯಿಂದ 40 ಕೋಟಿ ರು. ಕಿಕ್ ಬ್ಯಾಕ್ ಪಡೆದಿದ್ದಾರೆ: ರಾಹುಲ್‌ ಗಾಂಧಿ

ಇತ್ತೀಚಿಗಷ್ಟೇ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ....

ಅಹಮದಾಬಾದ್‌: ಇತ್ತೀಚಿಗಷ್ಟೇ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು, ಮೋದಿ ಮುಖ್ಯಮಂತ್ರಿಯಾಗಿದ್ದ ವೇಳೆ ಸಹರಾ ಕಂಪನಿಯಿಂದ 40 ಕೋಟಿ ರುಪಾಯಿ ಪಡೆದಿದ್ದಾರೆ ಎಂದು ಬುಧುವಾರ ಗಂಭೀರ ಆರೋಪ ಮಾಡಿದ್ದಾರೆ.
ಇಂದು ಗುಜರಾತ್ ನ ಮೆಹ್ಸನಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ಮೋದಿ ಮುಖ್ಯಮಂತ್ರಿಯಾಗಿದ್ದಾಗ ಸಹರಾ ಕಂಪನಿಯಿಂದ ಕೋಟ್ಯಂತರ ರುಪಾಯಿ ಕಿಕ್ ಬ್ಯಾಕ್ ಪಡೆದಿದ್ದು, ಈ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ಇದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.
ಸಹರಾ ಕಂಪೆನಿಯ ಕಚೇರಿಯ ಮೇಲೆ 2014ರಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದಾಗ ಮೋದಿ ಅವರಿಗೆ ಹಣ ನೀಡಿರುವ ದಾಖಲೆಗಳೂ ಪತ್ತೆಯಾಗಿವೆ. 2013ರ ಅಕ್ಟೋಬರ್‌ನಿಂದ 2014ರ ಫೆಬ್ರುವರಿವರೆಗೆ ಸಹರಾ ಕಂಪೆನಿಯಿಂದ ಮೋದಿ ಅವರು 40 ಕೋಟಿ ರುಪಾಯಿ ಪಡೆದಿದ್ದಾರೆ ಎಂದು ರಾಹುಲ್‌ ಆರೋಪಿಸಿದ್ದಾರೆ.
ಮೋದಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಹರಾ ಕಂಪನಿಯಿಂದ ಆರು ತಿಂಗಳಲ್ಲಿ 9 ಬಾರಿ ಹಣ ಸಂದಾಯ ಮಾಡಲಾಗಿದೆ ಎಂದು ರಾಹುಲ್‌ ಹೇಳಿದ್ದಾರೆ.
ಆದಾಯ ತೆರಿಗೆ ಇಲಾಖೆಯ ದಾಖಲೆಗಳ ಪ್ರಕಾರ, 2013ರ ಅಕ್ಟೋಬರ್ 30ರಂದು ಮೋದಿಜೀಗೆ 2.5 ಕೋಟಿ, ನ.12ರಂದು  5 ಕೋಟಿ ರೂಪಾಯಿ, ನವೆಂಬರ್ 27ರಂದು 2.5 ಕೋಟಿ , ನವೆಂಬರ್ 29ಕ್ಕೆ 5 ಕೋಟಿ ರೂಪಾಯಿ ಹಣ ಸಂದಾಯವಾಗಿರುವುದಾಗಿ ಗುಜರಾತ್ ನ ಮೆಹನ್ಸಾದಲ್ಲಿ ನಡೆದ ರಾಲಿಯಲ್ಲಿ ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ.
ಸಂಸತ್ತಿನಲ್ಲಿ ನಾನು ಮಾತನಾಡಲು ನೀವು (ಮೋದಿ) ಬಿಡಲಿಲ್ಲ. ನೀವು ನನ್ನ ಎದುರು ನಿಲ್ಲುವುದಿಲ್ಲ. ಅದು ಏಕೆಂದು ನನಗೆ ಗೊತ್ತು. ಶ್ರೀಮಂತರ ಸಾಲದ ಬಗ್ಗೆ ಮೃದುವಾಗಿರುವ ನೀವು (ಮೋದಿ) ಬಡವರು ಸಾಲ ತೀರಿಸದಿದ್ದರೆ ಜೈಲಿಗೆ ಹಾಕುತ್ತೀರಿ ಎಂದು ರಾಹುಲ್‌ ಕಿಡಿಕಾರಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಝಫರ್ ಇಸ್ಲಾಂ, ರಾಹುಲ್ ಗಾಂಧಿ ಪ್ರಧಾನಿ ವಿರುದ್ಧ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಪ್ರಧಾನಿ ವಿರುದ್ಧದ ಭ್ರಷ್ಟಾಚಾರದ ಬಗ್ಗೆ ತನ್ನ ಬಳಿ ದಾಖಲೆ ಇದೆ ಎಂದು ರಾಹುಲ್ ಹೇಳಿದ್ದರು. ಆದರೆ ದಾಖಲೆ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT