ಐಟಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡ ಹಣ 
ದೇಶ

ದೆಹಲಿ ರೈಲ್ವೆ ನಿಲ್ದಾಣದಲ್ಲಿ 31 ಲಕ್ಷ ರೂಪಾಯಿ ಹಳೆ ಕರೆನ್ಸಿ ನೋಟು ವಶ: ವ್ಯಕ್ತಿ ಬಂಧನ

ಗುರುವಾರ ಬೆಳಗಿನ ಜಾವ ದೆಹಲಿ ರೈಲ್ವೆ ನಿಲ್ದಾಣದಲ್ಲಿ ಹಳೆ 500 ಮತ್ತು 1000ದ 31 ಲಕ್ಷ ರೂಪಾಯಿಗಳನ್ನು...

ನವದೆಹಲಿ: ಗುರುವಾರ ಬೆಳಗಿನ ಜಾವ ದೆಹಲಿ ರೈಲ್ವೆ ನಿಲ್ದಾಣದಲ್ಲಿ ಹಳೆ 500 ಮತ್ತು 1000ದ 31 ಲಕ್ಷ ರೂಪಾಯಿಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.
ವ್ಯಕ್ತಿಯ ಹಿನ್ನೆಲೆ, ಆತನಿಗೆ ಇಷ್ಟೊಂದು ಹಣ ಎಲ್ಲಿಂದ ಬಂತು, ಎಲ್ಲಿಗೆ ಸಾಗಿಸಲು ಪ್ರಯತ್ನಿಸುತ್ತಿದ್ದನು ಎಂಬ ಬಗ್ಗೆ ಇಲಾಖೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.ಪ್ರಯಾಣಿಕ ದೆಹಲಿಯಿಂದ ಒಡಿಶಾಕ್ಕೆ ಪ್ರಯಾಣಿಸಲು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ.
ಈ ಮಧ್ಯೆ ನಿನ್ನೆ ಬೆಳಗ್ಗೆ ತಮಿಳುನಾಡು ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಮಮೋಹನ್ ರಾವ್ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ್ದ ಐಟಿ ಇಲಾಖೆ ಅಧಿಕಾರಿಗಳು ಇಂದು ಶೋಧ, ತಪಾಸಣೆ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ.ಅವರ ಪುತ್ರ ಮತ್ತು ಅಳಿಯಂದಿರ ಮನೆ ಮೇಲೆ ಕೂಡ ದಾಳಿ ನಡೆಸಿದ್ದು 2,000ದ ಹೊಸ ನೋಟುಗಳಿರುವ 30 ಲಕ್ಷ ರೂಪಾಯಿ, 5 ಕೆಜಿ ಚಿನ್ನ, ಸುಮಾರು 5 ಕೋಟಿ ರೂಪಾಯಿಗಳಷ್ಟು ಬೆಲೆಬಾಳುವ ಅಘೋಷಿತ ಸಂಪತ್ತುಗಳು, ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಸರ್ಕಾರ ಅಧಿಕ ಮೌಲ್ಯದ ನೋಟುಗಳ ಚಲಾವಣೆಯನ್ನು ನಿಷೇಧ ಮಾಡಿದ ನಂತರ ಕಪ್ಪು ಹಣವನ್ನು ಬಿಳಿಯಾಗಿಸುವ ಅನೇಕ ಮಂದಿ ಕಾಳ ಧನಿಕರ ಪ್ರಯತ್ನ ಮುಂದುವರಿದಿದೆ. ಇದನ್ನು ತಡೆಯುವ ಪ್ರಯತ್ನವಾಗಿ ಆದಾಯ ತೆರಿಗೆ ಇಲಾಖೆ ತನ್ನ ದಾಳಿ ಮುಂದುವರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT