ಅಖಿಲೇಶ್ ಯಾದವ್ 
ದೇಶ

'ನಗದು ರಹಿತ ಆರ್ಥಿಕತೆ ಅಚ್ಚೆದಿನ್ ಗಿಂತ ದೊಡ್ಡ ಕನಸು': ಅಖಿಲೇಶ್ ಯಾದವ್

ನೋಟ್ ನಿಷೇಧಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್...

ಲಖನೌ: ನೋಟ್ ನಿಷೇಧಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗರಿಷ್ಠ ಮೌಲ್ಯದ ನೋಟ್ ಬ್ಯಾನ್ ಪ್ರಮುಖ ವಿಷಯವಾಗಲಿದೆ ಎಂದು ಶನಿವಾರ ಹೇಳಿದ್ದಾರೆ.
ನೋಟ್ ನಿಷೇಧದ ನಂತರ ಬ್ಯಾಂಕ್ ಎಟಿಎಂನ ಕ್ಯೂನಲ್ಲಿ ನಿಂತಿರುಗಾಲೇ ಮೃತಪಟ್ಟ 14 ಜನರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿ ಮಾತನಾಡಿದ ಅಖಿಲೇಶ್ ಯಾದವ್, ನಗದು ರಹಿತ ಆರ್ಥಿಕತೆ ಅಚ್ಚೆದಿನ್ ಗಿಂತ ದೊಡ್ಡ ಕನಸು... ಆದರೆ ಕೇಂದ್ರ ಸರ್ಕಾರ ಇದನ್ನು ಹೇಗೆ ಅರಿತುಕೊಂಡಿತು ಎಂಬುದು ತಮಗೆ ಅರ್ಥವಾಗುತ್ತಿಲ್ಲ ಎಂದಿದ್ದಾರೆ.
ನೋಟ್ ನಿಷೇಧದಿಂದ ಜನತೆಗೆ ದ್ರೋಹ ಮಾಡಲಾಗಿದೆ ಮತ್ತು ದೇಶದ ಆರ್ಥಿಕತೆ ಹಾಳಾಗಿದೆ ಎಂದು ನೇರವಾಗಿ ಯಾರ ಹೆಸರು ಪ್ರಸ್ತಾಪಿಸದೆ ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದರು.
500 ಹಾಗೂ 1000 ರುಪಾಯಿ ನೋಟ್ ನಿಷೇಧ ನಿರ್ಧಾರ ಪ್ರಕಟಿಸಿದಾಗ ಜನ ದೊಡ್ಡ ಬದಲಾವಣೆಯಾಗಬಹುದು ಎಂಬ ವಿಶ್ವಾಸದಲ್ಲಿದ್ದರು. ಆದರೆ ನಂತರ ಇದರಿಂದ ಯಾವುದೇ ಪ್ರಯೋಜನ ಆಗಲಿಲ್ಲ ಎಂಬುದು ಅವರಿಗೆ ಅರ್ಥವಾಗಿದೆ. ಈ ಬಗ್ಗೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ತಜ್ಞರು ಬರೆಯುತ್ತಿದ್ದಾರೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT