ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ 
ದೇಶ

ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ: ರಾಜನಾಥ ಸಿಂಗ್ ವಿಶ್ವಾಸ

ಉತ್ತರಪ್ರದೇಶದಲ್ಲಿ ಮುಂಬರುವ ಚುನಾವಾಣೆಯಲ್ಲಿ ಖಂಡಿತವಾಗಿಯೂ ಬಿಜೆಪಿ ಬಹುಮತದಿಂದ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ರಾಜನಾಥ ಸಿಂಗ್ ಅವರು ಶನಿವಾಸ ವಿಶ್ವಾಸ ವ್ಯಕ್ತಪಡಿಸಿದ್ದಾರೆ...

ನವದೆಹಲಿ: ಉತ್ತರಪ್ರದೇಶದಲ್ಲಿ ಮುಂಬರುವ ಚುನಾವಾಣೆಯಲ್ಲಿ ಖಂಡಿತವಾಗಿಯೂ ಬಿಜೆಪಿ ಬಹುಮತದಿಂದ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಶನಿವಾಸ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಲಖನೌನಲ್ಲಿ ಆಯೋಜಿಸಲಾಗಿದ್ದ ಪರಿವರ್ತನ್ ರ್ಯಾಲಿಯಲ್ಲಿ ಭಾಗಿಯಾಗುವ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು,  ಪರಿವರ್ತನ್ ರ್ಯಾಲಿ ಮೂಲಕ ಬಿಜೆಪಿ ಉತ್ತರಪ್ರದೇಶದಲ್ಲಿ ಬದಲಾವಣೆ ಎಂಬ ಅಡಿಪಾಯವನ್ನು ಹಾಕುತ್ತಿದೆ. ರಾಜ್ಯದಲ್ಲಿ ಬದಲಾವಣೆ ಬರಲಿದೆ ಎಂಬುದರ ಬಗ್ಗೆ ಇಲ್ಲಿನ ಜನರಿಗೂ ನಂಬಿಕೆಯಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ನೋಟು ನಿಷೇಧ ಕುರಿತಂತೆ ಮಾತನಾಡಿರುವ ಅವರು, ರು.500 ಹಾಗೂ 1,000 ಮುಖಬೆಲೆಯ ದುಬಾರಿ ನೋಟಿನ ಮೇಲೆ ನಿಷೇಧ ಹೇರಿರುವಿಕೆಯನ್ನು ಚುನಾವಣೆ ಆಧಾರದ ಮೇಲೆ ನೋಡಬಾರದು. ನೋಟು ನಿಷೇಧ ನಿರ್ಧಾರ ಚುನಾವಣೆಯ ಗೆಲುವು ಅಥವಾ ಸೋಲಿಗೆ ಸಂಬಂಧಿಸಿದ್ದಲ್ಲ. ದೇಶದ ಹಿತಾಸಕ್ತಿಯನ್ನು ಅಲೋಚಿಸಿ ಸರ್ಕಾರ ನಿರ್ಧಾರವನ್ನು ಕೈಗೊಂಡಿದೆ. ಹೀಗಾಗಿ ನಿರ್ಧಾರ ಚುನಾವಣೆಗೆ ಸಂಬಂಧಿಸಿದ್ದಲ್ಲ ಎಂದು ತಿಳಿಸಿದ್ದಾರೆ.

ನೋಟು ನಿಷೇಧ ನಿರ್ಧಾರ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಸಹಾಯಕವಾಗಿದೆ. ನಿರ್ಧಾರದ ಬಳಿಕ ಸಾಕಷ್ಟು ನಕ್ಸಲರ ಖಾತೆಗಳನ್ನು ವಶಕ್ಕೆ ಪಡೆಯಲಾಗಿದೆ. ನೋಟು ನಿಷೇಧ ನಿರ್ಧಾರ ಭ್ರಷ್ಟಾಚಾರ ಹಾಗೂ ಕಪ್ಪುಹಣ ನಿಯಂತ್ರಣಕ್ಕೆ ಸಹಾಯಕವಾಗಲಿದೆ. ಅಲ್ಲದೆ, ದೇಶದ ಆರ್ಥಿಕ ಶಕ್ತಿಯನ್ನು ಹೆಚ್ಚಿಸಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT