ಶಿವಸೇನೆ ನಾಯಕಿ ಮನಿಷಾ ಕಯಾಂಡೆ 
ದೇಶ

ಛತ್ರಪತಿ ಶಿವಾಜಿ ಸ್ಮಾರಕ ಸಮಾರಂಭ ಬಿಜೆಪಿ ಕಾರ್ಯಕ್ರಮವಲ್ಲ: ಶಿವಸೇನೆ

ಛತ್ರಪತಿ ಶಿವಾಜಿ ಸ್ಮಾರಕ ನಿರ್ಮಾಣ ಸಮಾರಂಭವನ್ನು ಬಿಜೆಪಿ ಕಾರ್ಯಕ್ರಮದವಲ್ಲ, ಎಲ್ಲರೂ ಒಂದು ಕೂಡಿ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿದೆ ಎಂದು ಶಿವಸೇನೆ ಶನಿವಾರ ಹೇಳಿದೆ...

ಮುಂಬೈ: ಛತ್ರಪತಿ ಶಿವಾಜಿ ಸ್ಮಾರಕ ನಿರ್ಮಾಣ ಸಮಾರಂಭವನ್ನು ಬಿಜೆಪಿ ಕಾರ್ಯಕ್ರಮದವಲ್ಲ, ಎಲ್ಲರೂ ಒಂದು ಕೂಡಿ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿದೆ ಎಂದು ಶಿವಸೇನೆ ಶನಿವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಶಿವಸೇನೆ ನಾಯಕಿ ಮನಿಷಾ ಕಯಾಂಡೆ ಅವರು, ಛತ್ರಪತಿ ಶಿವಾಜಿ ಮಹಾರಾಜರ ಸ್ಮಾರಕ ಕೊನೆಗೂ ನಿರ್ಮಾಣವಾಗುತ್ತಿದ್ದು, ದೇಶದಲ್ಲಿರುವ ಪ್ರತೀಯೊಬ್ಬ ಭಾರತೀಯರು ಹೆಮ್ಮೆ ಪಡುವಂತಹ ದಿನ ಇದಾಗಿದೆ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಉದ್ಧವ್ ಠಾಕ್ರೆಯವರೂ ಕೂಡ ಭಾಗಿಯಾಗುತ್ತಿದ್ದಾರೆ. ಸ್ಮಾರಕ ನಿರ್ಮಾಣಕ್ಕಾಗಿ ಹೋರಾಟ ಮಾಡಿದವರು, ಸ್ಮಾರಕ ನಿರ್ಮಾಣಕ್ಕೆ ಕಾರಣರಾದವರನ್ನು ಸರ್ಕಾರ ನೆನೆಯಬೇಕಿದ್ದು ಕಾರ್ಯಕ್ರಮದಲ್ಲಿ ಎಲ್ಲರೂ ಒಂದಾಗಬೇಕಿದೆ. ಇದು ಬಿಜೆಪಿಯ ಕಾರ್ಯಕ್ರಮವಲ್ಲ. ಎಲ್ಲಾ ಪಕ್ಷದವರೂ ಸೇರಿ ನಡೆಸಿಕೊಡುತ್ತಿರುವ ಕಾರ್ಯಕ್ರಮವಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ವಿರುದ್ದ ಕಿಡಿಕಾಡಿರುವ ಅವರು, ಸರ್ಕಾರ ಯೋಜನೆ ಕೈಗೆತ್ತಿಕೊಂಡ ದಿನದಿಂದಲೂ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಆದರೆ, ಕಾಂಗ್ರೆಸ್ ಹಾಗೂ ಎನ್ ಸಿಪಿ ಸರ್ಕಾರವನ್ನು ಟೀಕೆ ಮಾಡುತ್ತಲೇ ಬಂದಿದೆ. 15 ವರ್ಷಗಳಿಂದ ತಾವು ನಡೆಸಿದ ಸರ್ಕಾರ ಹೇಗಿತ್ತು ಎಂಬುದನ್ನು ಅವರು ನೆನೆಯಬೇಕಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಮರಾಠರ ಮನವೊಲಿಕೆ ಮಾಡಲು ಮುಂದಾಗಿರುವ ಬಿಜೆಪಿ ಸರ್ಕಾರ ಹಿಂದೂ ಮಹಾಸಾಗರದಲ್ಲಿ ಛತ್ರಪತಿ ಶಿವಾಜಿಯ ಸ್ಮಾರಕ ನಿರ್ಮಿಸಲು ರು.3,600 ಕೋಟಿ ಗಳ ಯೋಜನೆಯನ್ನು ಕೈಗೆತ್ತಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT