ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ 
ದೇಶ

ತೀವ್ರಗೊಂಡ 'ನಾಗಾ' ಪ್ರತಿಭಟನೆ: ಮಣಿಪುರದಲ್ಲಿ ಭದ್ರತೆ ಪರಿಶೀಲಿಸಿ ಸೇನಾ ಮುಖ್ಯಸ್ಥ

ಹೊಸ ಜಿಲ್ಲೆಗಳ ರಚನೆ ಕುರಿತಂತೆ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವ ಸಂಯುಕ್ತ ನಾಗಾ ಮಂಡಳಿಗಳ ಪ್ರತಿಭಟನೆ ತೀವ್ರಗೊಂಡಿದ್ದು, ಈ ಹಿನ್ನಲೆಯಲ್ಲಿ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡಿ ಭದ್ರತೆಯನ್ನು...

ಇಂಫಾಲ: ಹೊಸ ಜಿಲ್ಲೆಗಳ ರಚನೆ ಕುರಿತಂತೆ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವ ಸಂಯುಕ್ತ ನಾಗಾ ಮಂಡಳಿಗಳ ಪ್ರತಿಭಟನೆ ತೀವ್ರಗೊಂಡಿದ್ದು, ಈ ಹಿನ್ನಲೆಯಲ್ಲಿ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡಿ ಭದ್ರತೆಯನ್ನು ಪರಿಶೀಲನೆ ನಡೆಸಿದ್ದಾರೆ.

ಪರಿಸ್ಥಿತಿ ಹದಗಟ್ಟ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಮಣಿಪುರದಲ್ಲಿಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿದ್ದರು. ಪರಿಸ್ಥಿತಿಯನ್ನು ಹತೋಟಿಗೆ ತರಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ತಿಳಿಸಿದ್ದರು.

ಇದೀಗ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಅವರು ಮಣಿಪುರಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಮಣಿಪುರ ಸರ್ಕಾರ ಇತ್ತೀಚೆಗೆ 7 ಜಿಲ್ಲೆಗಳನ್ನು ಹೊಸದಾಗಿ ರಚನೆ ಮಾಡಿತ್ತು. ಆಡಳಿತಕ್ಕೆ ಯಾವುದೇ ತೊಡಕುಗಳು ಎದುರಾಗದಂತೆ ಹಾಗೂ ಸುಗಮವಾಗಿ ಸರ್ಕಾರ ನಡೆಸಲು ಈ ರಚನೆ ಮಾಡಿರುವುದಾಗಿ ರಾಜ್ಯ ಸರ್ಕಾರ ಹೇಳಿಕೊಂಡಿತ್ತು. ಆದರೆ, ಇದನ್ನು ಒಪ್ಪದ ಸಂಯುಕ್ತ ನಾಗಾ ಮಂಡಳಿ 7 ಜಿಲ್ಲೆಗಳ ರಚನೆ 'ಗ್ರೇಟರ್ ನಾಗಾಲಿಂ' ರಚನೆ ಪ್ರಯತ್ನವನ್ನು ಮುರಿಯುವ ಯತ್ನ ಎಂದು ವ್ಯಾಖ್ಯಾನಿಸಿತ್ತು. ನಾಗಾಗಳ ನಡುವೆ ಒಡಕುಂಟು ಮಾಡಲು ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿತ್ತು. ಅಲ್ಲದೆ, ಸರ್ಕಾರದ ವಿರುದ್ಧ ತೀವ್ರ ವಿರೋಧ ವ್ಯಕ್ತಪಡಿಸಿದ್ದ ನಾಗಾಗಳು ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ಮುಂದಾಗಿತ್ತು. ಇದೀಗ ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel