ಜಿತೇಂದ್ರ ಸಿಂಗ್ 
ದೇಶ

ಪಾಕ್ ನಿರಾಶ್ರಿತರ ವಿಷಯದಲ್ಲಿ ಪ್ರತ್ಯೇಕತಾವಾದಿಗಳು, ಎನ್ ಸಿ ಯಿಂದ ಅನುಕೂಲಸಿಂಧು ರಾಜಕೀಯ: ಜಿತೇಂದ್ರ ಸಿಂಗ್

ನಿರಾಶ್ರಿತರ ವಿಚಾರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಪ್ರತ್ಯೇಕತಾವಾದಿಗಳ ಸಂಘಟಾನೆಗಳು ಅನುಕೂಲ ಸಿಂಧು ರಾಜಕೀಯ ಮಾಡುತ್ತಿವೆ ಎಂದಿದ್ದಾರೆ.

ಜಮ್ಮು: ಪಾಕಿಸ್ತಾನದ ನಿರಾಶ್ರಿತರ ವಿಷಯದಲ್ಲಿ ಪ್ರತ್ಯೇಕತಾವಾದಿಗಳನ್ನು, ಎನ್ ಸಿ ಯ ನಿಲುವುಗಳನ್ನು ಟೀಕಿಸಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ನಿರಾಶ್ರಿತರ ವಿಚಾರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಪ್ರತ್ಯೇಕತಾವಾದಿಗಳ ಸಂಘಟಾನೆಗಳು ಅನುಕೂಲ ಸಿಂಧು ರಾಜಕೀಯ ಮಾಡುತ್ತಿವೆ ಎಂದಿದ್ದಾರೆ. 
ನಿರಾಶ್ರಿತರಿಗೆ ಭಾರತೀಯ ನಾಗರಿಕರ ಗುರುತಿನ ಚೀಟಿ ನೀಡುತ್ತಿರುವುದನ್ನು ವಿರೋಧಿಸುತ್ತಿರುವ ನಡೆಯನ್ನು ಅನಗತ್ಯ ವಿವಾದ, ಅಮಾನವೀಯ ಎಂದು ಹೇಳಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಜಮ್ಮು-ಕಾಶ್ಮೀರವನ್ನು ತಮ್ಮ ನೆಲವೆಂದು ಅರಸಿ ಬಂದಿರುವ ನಿರಾಶ್ರಿತರಿಗೆ ಆಶ್ರಯವನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
ಇನ್ನು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ವಿರುದ್ಧವೂ ವಾಗ್ದಾಳಿ ನಡಿಸಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬಂದ ನಂತರ ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಪ್ರಮಾಣ ವಚನ ಸ್ವೀಕರಿಸುತ್ತಾರೆ. ಆದರೆ ಒಮ್ಮೆ ಅಧಿಕಾರ ಕಳೆದುಕೊಂಡ ನಂತರ ಪ್ರತ್ಯೇಕತಾವಾದಿಗಳೊಂದಿಗೆ ಸೇರಿ ಜಮ್ಮು-ಕಾಶ್ಮೀರದ ಸ್ಥಾನಮಾನಗಳ ಬಗ್ಗೆ ಪ್ರಶ್ನೆ ಮಾಡುವ ಮೂಲಕ ಅನುಕೂಲಸಿಂಧು ರಾಜಕಾರಣ ಮಾಡುತ್ತಾರೆ ಎಂದು ಜಿತೇಂದ್ರ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT