ಸಾಂದರ್ಭಿಕ ಚಿತ್ರ 
ದೇಶ

1 ಕೋಟಿ ಹಣಕ್ಕಾಗಿ 3 ವರ್ಷದ ಬಾಲಕಿಯನ್ನು ಕೊಂದು ತುಂಡು ತುಂಡಾಗಿ ಕತ್ತರಿಸಿದ ಅಪ್ರಾಪ್ತರು

ಮೂರು ವರ್ಷದ ಬಾಲಕಿಯನ್ನ ಅಪಹರಿಸಿದ ಅಪ್ರಾಪ್ತರು ಆಕೆಯನ್ನ ಕೊಂದು ತುಂಡು ತುಂಡು ಮಾಡಿರುವ ಘಟನೆ...

ಮುಂಬಯಿ: ಮೂರು ವರ್ಷದ ಬಾಲಕಿಯನ್ನ ಅಪಹರಿಸಿದ ಅಪ್ರಾಪ್ತರು ಆಕೆಯನ್ನ ಕೊಂದು ತುಂಡು ತುಂಡು ಮಾಡಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ.

ಬಾಲಕಿಯನ್ನು ಅಪಹರಿಸಿದ್ದ ಇಬ್ಬರು ಅಪ್ರಾಪ್ತ ಬಾಲಕರು ಆಕೆಯ ಪೋಷಕರಿಂದ 1 ಕೋಟಿ ರು ಹಣಕ್ಕಾಗಿ ಬೇಡಿಕೆಯಿಟ್ಟಿದ್ದರು. ನಿನ್ನೆ ರಾತ್ರಿ ಕಾಜಿಪುರದ ನಾಗಪಾಡ ಪ್ರದೇಶದಲ್ಲಿ ಬಾಲಕಿಯ ದೇಹ ಸಿಕ್ಕಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಂದು ಬೆಳಗ್ಗೆ ಇಬ್ಬರು ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಡಿಸೆಂಬರ್ 5 ರಂದು ಬಾಲಕಿ ನಾಪತ್ತೆಯಾಗಿದ್ದು, ಈ ಸಂಬಂಧ ಆಕೆ ಪೋಷಕರು ಜೆ.ಜೆ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ನಂತರ ಬಾಲಕಿಯ ಪೋಷಕರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ 1 ಕೋಟಿ ರು ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಆದರೆ ಅಷ್ಟೊಂದು ಪ್ರಮಾಣದಲ್ಲಿ ಹಣ ಹೊಂದಿಸಲು ಸಾಧ್ಯವಿಲ್ಲ ಎಂದು ಹೇಳಿದ್ದ ಬಾಲಕಿ ತಂದೆ 28 ಲಕ್ಷ ರು ಹಣ ನೀಡಲು ಒಪ್ಪಿಕೊಂಡಿದ್ದರು ಎಂದು ಡಿಸಿಪಿ ಮನೋದ್ ಕುಮಾರ್ ತಿಳಿಸಿದ್ದಾರೆ.

ನಂತರ ಥಾಣೆ ಬಳಿಯ ಕಾಲ್ವಾ ಟೌನ್ ಬಳಿ ಹಣ ತರುವಂತೆ ಅಪರಹರಣ ಕಾರರು ಬಾಲಕಿ ತಂದೆಗೆ ತಿಳಿಸಿದ್ದರು. ಬಾಲಕಿಯ ನೆರೆಮನೆಯಲ್ಲಿದ್ದ 16 ವರ್ಷದ ಬಾಲಕ ಆಕೆಯನ್ನು ಅಪಹರಿಸಿ ತನ್ನ ಸ್ನೇಹಿತರೊಂದಿಗೆ ಸೇರಿ ಡಿಸೆಂಬರ್ 5 ರಂದು ಮೊಬೈಲ್ ಚಾರ್ಜರ್ ವೈರ್ ನಿಂದ ಆಕೆಯನ್ನು ಕೊಂದು ತುಂಡರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT