ರಾಷ್ಟ್ರ ಲಾಂಛನ-ದೀನನಾಥ ಭಾರ್ಗವ 
ದೇಶ

ರಾಷ್ಟ್ರ ಲಾಂಛನ ಚಿತ್ರಿಸಿದ್ದ ದೀನನಾಥ್ ಭಾರ್ಗವ ವಿಧಿವಶ

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕಲಾವಿದ ದೀನನಾಥ ಭಾರ್ಗವ ಅವರು ವಿಧಿವಶರಾಗಿದ್ದಾರೆ...

ಇಂದೋರ್: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕಲಾವಿದ ದೀನನಾಥ ಭಾರ್ಗವ ಅವರು ವಿಧಿವಶರಾಗಿದ್ದಾರೆ. 
ರಾಷ್ಟ್ರ ಲಾಂಛನವಾಗಿ ಸಾರನಾಥನ ಸಿಂಹ ಬೋದಿಗೆ ಅಶೋಕ ಚಕ್ರವನ್ನು ವಿನ್ಯಾಸಗೊಳಿಸಿದ್ದ ಕಲಾವಿದ 89 ವರ್ಷದ ದೀನನಾಥ ಭಾರ್ಗವ ಅವರು ಇಂದೋರ್ ನಲ್ಲಿ ವಿಧಿವಶರಾಗಿದ್ದಾರೆ. ಭಾರ್ಗವ ಅವರು ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 
1927ರ ನವೆಂಬರ್ 1 ರಂದು ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಮುಲ್ತಾಯಿಯಲ್ಲಿ ಭಾರ್ಗವ ಅವರು ಜನಿಸಿದ್ದರು. ಶಾಂತಿನಿಕೇತನ ಕಲಾಭವನದ ಪ್ರಾಂಶುಪಾಲರಾಗಿದ್ದ ಖ್ಯಾತ ಕಲಾವಿದ ನಂದಲಾಲ್ ಬೋಸ್ ಅವರು ಭಾರತೀಯ ಸಂವಿಧಾನದ ಕರಡು ಪ್ರತಿಯ ಪುಟ ವಿನ್ಯಾಸಗೊಳಿಸುವ ತಂಡಕ್ಕೆ ಆಯ್ಕೆ ಮಾಡಿದ್ದರು. 
ದೀನನಾಥ ಭಾರ್ಗವ ಅವರು ರಚಿಸಿದ್ದ ರಾಷ್ಟ್ರೀಯ ಲಾಂಛನವನ್ನು ಸರ್ಕಾರ 1950ರ ಜನವರಿ 2ರಂದು ಅಳವಡಿಸಿಕೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT