ರಾಷ್ಟ್ರ ಲಾಂಛನ-ದೀನನಾಥ ಭಾರ್ಗವ 
ದೇಶ

ರಾಷ್ಟ್ರ ಲಾಂಛನ ಚಿತ್ರಿಸಿದ್ದ ದೀನನಾಥ್ ಭಾರ್ಗವ ವಿಧಿವಶ

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕಲಾವಿದ ದೀನನಾಥ ಭಾರ್ಗವ ಅವರು ವಿಧಿವಶರಾಗಿದ್ದಾರೆ...

ಇಂದೋರ್: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕಲಾವಿದ ದೀನನಾಥ ಭಾರ್ಗವ ಅವರು ವಿಧಿವಶರಾಗಿದ್ದಾರೆ. 
ರಾಷ್ಟ್ರ ಲಾಂಛನವಾಗಿ ಸಾರನಾಥನ ಸಿಂಹ ಬೋದಿಗೆ ಅಶೋಕ ಚಕ್ರವನ್ನು ವಿನ್ಯಾಸಗೊಳಿಸಿದ್ದ ಕಲಾವಿದ 89 ವರ್ಷದ ದೀನನಾಥ ಭಾರ್ಗವ ಅವರು ಇಂದೋರ್ ನಲ್ಲಿ ವಿಧಿವಶರಾಗಿದ್ದಾರೆ. ಭಾರ್ಗವ ಅವರು ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 
1927ರ ನವೆಂಬರ್ 1 ರಂದು ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಮುಲ್ತಾಯಿಯಲ್ಲಿ ಭಾರ್ಗವ ಅವರು ಜನಿಸಿದ್ದರು. ಶಾಂತಿನಿಕೇತನ ಕಲಾಭವನದ ಪ್ರಾಂಶುಪಾಲರಾಗಿದ್ದ ಖ್ಯಾತ ಕಲಾವಿದ ನಂದಲಾಲ್ ಬೋಸ್ ಅವರು ಭಾರತೀಯ ಸಂವಿಧಾನದ ಕರಡು ಪ್ರತಿಯ ಪುಟ ವಿನ್ಯಾಸಗೊಳಿಸುವ ತಂಡಕ್ಕೆ ಆಯ್ಕೆ ಮಾಡಿದ್ದರು. 
ದೀನನಾಥ ಭಾರ್ಗವ ಅವರು ರಚಿಸಿದ್ದ ರಾಷ್ಟ್ರೀಯ ಲಾಂಛನವನ್ನು ಸರ್ಕಾರ 1950ರ ಜನವರಿ 2ರಂದು ಅಳವಡಿಸಿಕೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT