ಬಿಎಸ್ ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ 
ದೇಶ

ಕೇಂದ್ರೀಯ ಸಂಸ್ಥೆಗಳ ಮೂಲಕ ರಾಜಕೀಯ ಪಕ್ಷಗಳ ಮೇಲೆ ಬಿಜೆಪಿ ಒತ್ತಡ: ಮಾಯಾವತಿ

ಹತಾಶೆಗೊಂಡಿರುವ ಬಿಜೆಪಿ ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಳ್ಳುವ ಮೂಲಕ ರಾಜಕೀಯ ಪಕ್ಷಗಳ ಮೇಲೆ ಒತ್ತಡವನ್ನು ಹೇರುತ್ತಿದೆ ಬಿಎಸ್ ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ಸೋಮವಾರ...

ಲಖನೌ: ಹತಾಶೆಗೊಂಡಿರುವ ಬಿಜೆಪಿ ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಳ್ಳುವ ಮೂಲಕ ರಾಜಕೀಯ ಪಕ್ಷಗಳ ಮೇಲೆ ಒತ್ತಡವನ್ನು ಹೇರುತ್ತಿದೆ ಬಿಎಸ್ ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ಸೋಮವಾರ ಆರೋಪಿಸಿದ್ದಾರೆ.

ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ. ಉತ್ತರಪ್ರದೇಶದಲ್ಲಿ ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಮೈತ್ರಿಗಳ್ಳುವಂತೆ ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ಬಿಜೆಪಿ ಒತ್ತಡ ಹೇರುತ್ತಿದೆ ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷಗಳು ಮೈತ್ರಿಯಾಗುತ್ತಿವೆ ಎಂದು ಹೇಳಲಾಗುತ್ತಿದೆ. ಆದರೆ, ಬಿಜೆಪಿಯ ಅಂತಿಮ ನಿರ್ಧಾರದ ನಂತರವಷ್ಟೇ ಪಕ್ಷಗಳು ಮೈತ್ರಿಯಾಗುತ್ತವೆಯೋ ಅಥವಾ ಇಲ್ಲವೋ ಎಂಬುದು ಬಹಿರಂಗಗೊಳ್ಳಲಿದೆ. ಮುಲಾಯಂ ಸಿಂಗ್ ರಂತೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಚುನಾವಣೆಗೂ ಮುನ್ನ ತಪ್ಪು ಭರವಸೆಗಳನ್ನು ನೀಡುತ್ತಿದ್ದಾರೆ. ಆದರೆ, ಉತ್ತರಪ್ರದೇಶದಲ್ಲಿ ಅವರು ಗೆಲವು ಸಾಧಿಸುವುದಿಲ್ಲ. ಬಿಎಸ್ ಪಿ ಅಧಿಕಾರದಲ್ಲಿದ್ದಾಗ ಬಿಜೆಪಿ ದುರ್ಬಲವಾಗಿತ್ತು. ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದಾಗ ಬಿಜೆಪಿ ಶಕ್ತಿ ಮತ್ತೆ ಬಂದಿತು. ಬಿಜೆಪಿ ಹಾಗೂ ಸಮಾಜವಾದಿ ಪಕ್ಷ ಒಂದಾಗಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ.

ನೋಟು ನಿಷೇಧದಿಂದ ಶೇ.90 ರಷ್ಟು ಜನರು ಬೇಸರಗೊಂಡಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಗೆ ಸರಿಯಾದ ಪಾಠವನ್ನು ಕಲಿಸಲಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT