ರಾಹುಲ್ ಗಾಂಧಿ 
ದೇಶ

ನೋಟ್ ನಿಷೇಧ ಸಮಸ್ಯೆಗಳಿಗೆ ಕೊನೆಯೇ ಇಲ್ಲ: ರಾಹುಲ್ ಗಾಂಧಿ

ನೋಟ್ ನಿಷೇಧ ಸಮಸ್ಯೆಗಳಿಗೆ ಕೊನೆಯೇ ಇಲ್ಲ ಎಂದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ನೀವು ಭರವಸೆ ನೀಡಿದಂತೆ...

ಬರನ್: ನೋಟ್ ನಿಷೇಧ ಸಮಸ್ಯೆಗಳಿಗೆ ಕೊನೆಯೇ ಇಲ್ಲ ಎಂದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ನೀವು ಭರವಸೆ ನೀಡಿದಂತೆ ಡಿಸೆಂಬರ್ 30ರ ನಂತರ ನಗದು ಬಿಕ್ಕಟ್ಟು ಸಮಸ್ಯೆ ಅಂತ್ಯವಾಗಲಿದೆಯೇ? ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.
ಇಂದು ಕಾಂಗ್ರೆಸ್ ಬಹಿರಂಗಸಭೆ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನೋಟ್ ನಿಷೇಧದಿಂದ ಉಂಟಾಗಿರುವ ನಗದು ಬಿಕ್ಕಟ್ಟಿನಿಂದ ಬಡವರಿಗೆ, ರೈತರಿಗೆ ಮತ್ತು ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದರು.
ಡಿಸೆಂಬರ್ 30ರ ನಂತರ ಎಲ್ಲಾ ಸಮಸ್ಯೆಗಳಿಗೂ ಬ್ರೇಕ್ ಬಿಳಲಿದೆ ಎಂದು ಮೋದಿಜಿ ಹೇಳಿದ್ದಾರೆ. ಆದರೆ ಅದು ಸಾಧ್ಯವಿಲ್ಲ. ನಗದು ಸಮಸ್ಯೆ ಇನ್ನೂ ಆರರಿಂದ ಏಳು ತಿಂಗಳು ಮುಂದುವರೆಯಲಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.
ನೋಟ್ ನಿಷೇಧದ ನಂತರ ಬಡವರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರದ ಮೋದಿ ಸರ್ಕಾರ ಹಾಗೂ ರಾಜಸ್ಥಾನ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ರಾಹುಲ್ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಹೃದಯ ಛಿದ್ರವಾಗಿದೆ: ಆಫ್ರಿಕಾ ವಿರುದ್ಧದ ಸರಣಿ ಹೀನಾಯ ಸೋಲಿನ ನಂತರ ಇಡೀ ದೇಶದ ಕ್ಷಮೆಯಾಚಿಸಿದ ರಿಷಭ್ ಪಂತ್!

WPL Auction 2026: ಬರೋಬ್ಬರಿ 3.2 ಕೋಟಿ ರೂ. ಗೆ ಆಲ್ ರೌಂಡರ್ ದೀಪ್ತಿ ಶರ್ಮಾ ಸೋಲ್ಡೌಟ್‌! ಸ್ಟನ್ ಆದ ಗಂಗೂಲಿ

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

SCROLL FOR NEXT