ರಾಹುಲ್ ಗಾಂಧಿ 
ದೇಶ

ನೋಟ್ ನಿಷೇಧ ಸಮಸ್ಯೆಗಳಿಗೆ ಕೊನೆಯೇ ಇಲ್ಲ: ರಾಹುಲ್ ಗಾಂಧಿ

ನೋಟ್ ನಿಷೇಧ ಸಮಸ್ಯೆಗಳಿಗೆ ಕೊನೆಯೇ ಇಲ್ಲ ಎಂದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ನೀವು ಭರವಸೆ ನೀಡಿದಂತೆ...

ಬರನ್: ನೋಟ್ ನಿಷೇಧ ಸಮಸ್ಯೆಗಳಿಗೆ ಕೊನೆಯೇ ಇಲ್ಲ ಎಂದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ನೀವು ಭರವಸೆ ನೀಡಿದಂತೆ ಡಿಸೆಂಬರ್ 30ರ ನಂತರ ನಗದು ಬಿಕ್ಕಟ್ಟು ಸಮಸ್ಯೆ ಅಂತ್ಯವಾಗಲಿದೆಯೇ? ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.
ಇಂದು ಕಾಂಗ್ರೆಸ್ ಬಹಿರಂಗಸಭೆ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನೋಟ್ ನಿಷೇಧದಿಂದ ಉಂಟಾಗಿರುವ ನಗದು ಬಿಕ್ಕಟ್ಟಿನಿಂದ ಬಡವರಿಗೆ, ರೈತರಿಗೆ ಮತ್ತು ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದರು.
ಡಿಸೆಂಬರ್ 30ರ ನಂತರ ಎಲ್ಲಾ ಸಮಸ್ಯೆಗಳಿಗೂ ಬ್ರೇಕ್ ಬಿಳಲಿದೆ ಎಂದು ಮೋದಿಜಿ ಹೇಳಿದ್ದಾರೆ. ಆದರೆ ಅದು ಸಾಧ್ಯವಿಲ್ಲ. ನಗದು ಸಮಸ್ಯೆ ಇನ್ನೂ ಆರರಿಂದ ಏಳು ತಿಂಗಳು ಮುಂದುವರೆಯಲಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.
ನೋಟ್ ನಿಷೇಧದ ನಂತರ ಬಡವರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರದ ಮೋದಿ ಸರ್ಕಾರ ಹಾಗೂ ರಾಜಸ್ಥಾನ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ರಾಹುಲ್ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT