ಸಾಂದರ್ಭಿಕ ಚಿತ್ರ 
ದೇಶ

ಶಬರಿಮಲೆಯಲ್ಲಿ ಜನದಟ್ಟಣೆ ನಿಯಂತ್ರಿಸಲು ವೈಜ್ಞಾನಿಕ ಕ್ರಮ ಅಳವಡಿಕೆಗೆ ಕೇರಳ ಸರ್ಕಾರ ಚಿಂತನೆ

ಖ್ಯಾತ ಶಬರಿಮಲೆ ದೇವಸ್ಥಾನದಲ್ಲಿ ಮಕರಜ್ಯೋತಿ, ಸಂಕ್ರಾಂತಿ ಸಮಯದಲ್ಲಿ ಯಾತ್ರಿಕರ ನೂಕುನುಗ್ಗಲನ್ನು...

ಶಬರಿಮಲ: ಖ್ಯಾತ ಶಬರಿಮಲೆ ದೇವಸ್ಥಾನದಲ್ಲಿ ಮಕರಜ್ಯೋತಿ, ಸಂಕ್ರಾಂತಿ ಸಮಯದಲ್ಲಿ ಯಾತ್ರಿಕರ ನೂಕುನುಗ್ಗಲನ್ನು ನಿಯಂತ್ರಿಸಲು ವೈಜ್ಞಾನಿಕ ಕ್ರಮವನ್ನು ಜಾರಿಗೆ ತರಲಾಗುವುದು ಎಂದು ಕೇರಳದ ದೇವಸ್ವಮ್ ಸಚಿವ ಕಡಕಂಪಳ್ಳಿ ಸುರೇಂದ್ರನ್ ತಿಳಿಸಿದ್ದಾರೆ.
ಜನರ ನೂಕುನುಗ್ಗಲು ಜಾಸ್ತಿಯಾಗುವ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ, ಕೇಂದ್ರ ಮೀಸಲು ಪಡೆಯನ್ನು ನಿಯೋಜಿಸಲಾಗುವುದು ಎಂದರು.
ನಿನ್ನೆ ಭಾನುವಾರ ಮಾಳಿಕಾಪ್ಪುರಂ ಎಂಬಲ್ಲಿ ಉಂಟಾದ ಕಾಲ್ತುಳಿತಕ್ಕೆ 31 ಜನರು ಗಾಯಗೊಂಡಿದ್ದಾರೆ. ಇವರಲ್ಲಿ 8 ಮಂದಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಚಿಕಿತ್ಸೆಯ ನೆರವಿಗೆ ರಾಜ್ಯ ಸರ್ಕಾರ ಸಹಾಯದ ನೆರವು ಚಾಚಿದೆ.
ಸಾಕಷ್ಟು ಪೊಲೀಸ್ ಸಿಬ್ಬಂದಿಯ ಕೊರತೆ ಮತ್ತು ಬ್ಯಾರಿಕೇಡ್ ಗಳು ಇಲ್ಲದಿರುವುದು ಕಾಲ್ತುಳಿತದಂತಹ ಘಟನೆಗಳಿಗೆ ಕಾರಣ ಎನ್ನಲಾಗುತ್ತಿದೆ. ನಿನ್ನೆಯ ಘಟನೆ ನಡೆದ ಸಮಯದಲ್ಲಿ ಸಾಕಷ್ಟು ಪೊಲೀಸ್ ಅಧಿಕಾರಿಗಳು, ಕೇಂದ್ರ ಅರೆಸೇನಾ ಸಿಬ್ಬಂದಿ ಸಾಕಷ್ಟು ಸಂಖ್ಯೆಯಲ್ಲಿ ಇರಲಿಲ್ಲ ಎಂದು ಭಕ್ತರು ಹೇಳುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?