ಸಾಂದರ್ಭಿಕ ಚಿತ್ರ 
ದೇಶ

ಶಬರಿಮಲೆಯಲ್ಲಿ ಜನದಟ್ಟಣೆ ನಿಯಂತ್ರಿಸಲು ವೈಜ್ಞಾನಿಕ ಕ್ರಮ ಅಳವಡಿಕೆಗೆ ಕೇರಳ ಸರ್ಕಾರ ಚಿಂತನೆ

ಖ್ಯಾತ ಶಬರಿಮಲೆ ದೇವಸ್ಥಾನದಲ್ಲಿ ಮಕರಜ್ಯೋತಿ, ಸಂಕ್ರಾಂತಿ ಸಮಯದಲ್ಲಿ ಯಾತ್ರಿಕರ ನೂಕುನುಗ್ಗಲನ್ನು...

ಶಬರಿಮಲ: ಖ್ಯಾತ ಶಬರಿಮಲೆ ದೇವಸ್ಥಾನದಲ್ಲಿ ಮಕರಜ್ಯೋತಿ, ಸಂಕ್ರಾಂತಿ ಸಮಯದಲ್ಲಿ ಯಾತ್ರಿಕರ ನೂಕುನುಗ್ಗಲನ್ನು ನಿಯಂತ್ರಿಸಲು ವೈಜ್ಞಾನಿಕ ಕ್ರಮವನ್ನು ಜಾರಿಗೆ ತರಲಾಗುವುದು ಎಂದು ಕೇರಳದ ದೇವಸ್ವಮ್ ಸಚಿವ ಕಡಕಂಪಳ್ಳಿ ಸುರೇಂದ್ರನ್ ತಿಳಿಸಿದ್ದಾರೆ.
ಜನರ ನೂಕುನುಗ್ಗಲು ಜಾಸ್ತಿಯಾಗುವ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ, ಕೇಂದ್ರ ಮೀಸಲು ಪಡೆಯನ್ನು ನಿಯೋಜಿಸಲಾಗುವುದು ಎಂದರು.
ನಿನ್ನೆ ಭಾನುವಾರ ಮಾಳಿಕಾಪ್ಪುರಂ ಎಂಬಲ್ಲಿ ಉಂಟಾದ ಕಾಲ್ತುಳಿತಕ್ಕೆ 31 ಜನರು ಗಾಯಗೊಂಡಿದ್ದಾರೆ. ಇವರಲ್ಲಿ 8 ಮಂದಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಚಿಕಿತ್ಸೆಯ ನೆರವಿಗೆ ರಾಜ್ಯ ಸರ್ಕಾರ ಸಹಾಯದ ನೆರವು ಚಾಚಿದೆ.
ಸಾಕಷ್ಟು ಪೊಲೀಸ್ ಸಿಬ್ಬಂದಿಯ ಕೊರತೆ ಮತ್ತು ಬ್ಯಾರಿಕೇಡ್ ಗಳು ಇಲ್ಲದಿರುವುದು ಕಾಲ್ತುಳಿತದಂತಹ ಘಟನೆಗಳಿಗೆ ಕಾರಣ ಎನ್ನಲಾಗುತ್ತಿದೆ. ನಿನ್ನೆಯ ಘಟನೆ ನಡೆದ ಸಮಯದಲ್ಲಿ ಸಾಕಷ್ಟು ಪೊಲೀಸ್ ಅಧಿಕಾರಿಗಳು, ಕೇಂದ್ರ ಅರೆಸೇನಾ ಸಿಬ್ಬಂದಿ ಸಾಕಷ್ಟು ಸಂಖ್ಯೆಯಲ್ಲಿ ಇರಲಿಲ್ಲ ಎಂದು ಭಕ್ತರು ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT