ಸಾಂದರ್ಭಿಕ ಚಿತ್ರ 
ದೇಶ

ಶಬರಿಮಲೆಯಲ್ಲಿ ಜನದಟ್ಟಣೆ ನಿಯಂತ್ರಿಸಲು ವೈಜ್ಞಾನಿಕ ಕ್ರಮ ಅಳವಡಿಕೆಗೆ ಕೇರಳ ಸರ್ಕಾರ ಚಿಂತನೆ

ಖ್ಯಾತ ಶಬರಿಮಲೆ ದೇವಸ್ಥಾನದಲ್ಲಿ ಮಕರಜ್ಯೋತಿ, ಸಂಕ್ರಾಂತಿ ಸಮಯದಲ್ಲಿ ಯಾತ್ರಿಕರ ನೂಕುನುಗ್ಗಲನ್ನು...

ಶಬರಿಮಲ: ಖ್ಯಾತ ಶಬರಿಮಲೆ ದೇವಸ್ಥಾನದಲ್ಲಿ ಮಕರಜ್ಯೋತಿ, ಸಂಕ್ರಾಂತಿ ಸಮಯದಲ್ಲಿ ಯಾತ್ರಿಕರ ನೂಕುನುಗ್ಗಲನ್ನು ನಿಯಂತ್ರಿಸಲು ವೈಜ್ಞಾನಿಕ ಕ್ರಮವನ್ನು ಜಾರಿಗೆ ತರಲಾಗುವುದು ಎಂದು ಕೇರಳದ ದೇವಸ್ವಮ್ ಸಚಿವ ಕಡಕಂಪಳ್ಳಿ ಸುರೇಂದ್ರನ್ ತಿಳಿಸಿದ್ದಾರೆ.
ಜನರ ನೂಕುನುಗ್ಗಲು ಜಾಸ್ತಿಯಾಗುವ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ, ಕೇಂದ್ರ ಮೀಸಲು ಪಡೆಯನ್ನು ನಿಯೋಜಿಸಲಾಗುವುದು ಎಂದರು.
ನಿನ್ನೆ ಭಾನುವಾರ ಮಾಳಿಕಾಪ್ಪುರಂ ಎಂಬಲ್ಲಿ ಉಂಟಾದ ಕಾಲ್ತುಳಿತಕ್ಕೆ 31 ಜನರು ಗಾಯಗೊಂಡಿದ್ದಾರೆ. ಇವರಲ್ಲಿ 8 ಮಂದಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಚಿಕಿತ್ಸೆಯ ನೆರವಿಗೆ ರಾಜ್ಯ ಸರ್ಕಾರ ಸಹಾಯದ ನೆರವು ಚಾಚಿದೆ.
ಸಾಕಷ್ಟು ಪೊಲೀಸ್ ಸಿಬ್ಬಂದಿಯ ಕೊರತೆ ಮತ್ತು ಬ್ಯಾರಿಕೇಡ್ ಗಳು ಇಲ್ಲದಿರುವುದು ಕಾಲ್ತುಳಿತದಂತಹ ಘಟನೆಗಳಿಗೆ ಕಾರಣ ಎನ್ನಲಾಗುತ್ತಿದೆ. ನಿನ್ನೆಯ ಘಟನೆ ನಡೆದ ಸಮಯದಲ್ಲಿ ಸಾಕಷ್ಟು ಪೊಲೀಸ್ ಅಧಿಕಾರಿಗಳು, ಕೇಂದ್ರ ಅರೆಸೇನಾ ಸಿಬ್ಬಂದಿ ಸಾಕಷ್ಟು ಸಂಖ್ಯೆಯಲ್ಲಿ ಇರಲಿಲ್ಲ ಎಂದು ಭಕ್ತರು ಹೇಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT