ಸಾಂದರ್ಭಿಕ ಚಿತ್ರ 
ದೇಶ

ಶಬರಿಮಲೆಯಲ್ಲಿ ಜನದಟ್ಟಣೆ ನಿಯಂತ್ರಿಸಲು ವೈಜ್ಞಾನಿಕ ಕ್ರಮ ಅಳವಡಿಕೆಗೆ ಕೇರಳ ಸರ್ಕಾರ ಚಿಂತನೆ

ಖ್ಯಾತ ಶಬರಿಮಲೆ ದೇವಸ್ಥಾನದಲ್ಲಿ ಮಕರಜ್ಯೋತಿ, ಸಂಕ್ರಾಂತಿ ಸಮಯದಲ್ಲಿ ಯಾತ್ರಿಕರ ನೂಕುನುಗ್ಗಲನ್ನು...

ಶಬರಿಮಲ: ಖ್ಯಾತ ಶಬರಿಮಲೆ ದೇವಸ್ಥಾನದಲ್ಲಿ ಮಕರಜ್ಯೋತಿ, ಸಂಕ್ರಾಂತಿ ಸಮಯದಲ್ಲಿ ಯಾತ್ರಿಕರ ನೂಕುನುಗ್ಗಲನ್ನು ನಿಯಂತ್ರಿಸಲು ವೈಜ್ಞಾನಿಕ ಕ್ರಮವನ್ನು ಜಾರಿಗೆ ತರಲಾಗುವುದು ಎಂದು ಕೇರಳದ ದೇವಸ್ವಮ್ ಸಚಿವ ಕಡಕಂಪಳ್ಳಿ ಸುರೇಂದ್ರನ್ ತಿಳಿಸಿದ್ದಾರೆ.
ಜನರ ನೂಕುನುಗ್ಗಲು ಜಾಸ್ತಿಯಾಗುವ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ, ಕೇಂದ್ರ ಮೀಸಲು ಪಡೆಯನ್ನು ನಿಯೋಜಿಸಲಾಗುವುದು ಎಂದರು.
ನಿನ್ನೆ ಭಾನುವಾರ ಮಾಳಿಕಾಪ್ಪುರಂ ಎಂಬಲ್ಲಿ ಉಂಟಾದ ಕಾಲ್ತುಳಿತಕ್ಕೆ 31 ಜನರು ಗಾಯಗೊಂಡಿದ್ದಾರೆ. ಇವರಲ್ಲಿ 8 ಮಂದಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಚಿಕಿತ್ಸೆಯ ನೆರವಿಗೆ ರಾಜ್ಯ ಸರ್ಕಾರ ಸಹಾಯದ ನೆರವು ಚಾಚಿದೆ.
ಸಾಕಷ್ಟು ಪೊಲೀಸ್ ಸಿಬ್ಬಂದಿಯ ಕೊರತೆ ಮತ್ತು ಬ್ಯಾರಿಕೇಡ್ ಗಳು ಇಲ್ಲದಿರುವುದು ಕಾಲ್ತುಳಿತದಂತಹ ಘಟನೆಗಳಿಗೆ ಕಾರಣ ಎನ್ನಲಾಗುತ್ತಿದೆ. ನಿನ್ನೆಯ ಘಟನೆ ನಡೆದ ಸಮಯದಲ್ಲಿ ಸಾಕಷ್ಟು ಪೊಲೀಸ್ ಅಧಿಕಾರಿಗಳು, ಕೇಂದ್ರ ಅರೆಸೇನಾ ಸಿಬ್ಬಂದಿ ಸಾಕಷ್ಟು ಸಂಖ್ಯೆಯಲ್ಲಿ ಇರಲಿಲ್ಲ ಎಂದು ಭಕ್ತರು ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT