ತಮ್ಮ ತಂದೆಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದ ಇಂದ್ರಾಣಿ ಮುಖರ್ಜಿ 
ದೇಶ

ತಂದೆಯ ಅಂತ್ಯ ಸಂಸ್ಕಾರಕ್ಕೆ ಒಂದು ದಿನ ಜೈಲಿನಿಂದ ಹೊರಬಂದ ಇಂದ್ರಾಣಿ ಮುಖರ್ಜಿ

ಶೀನಾ ಬೊರಾ ಹತ್ಯೆಯ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಅವರಿಗೆ ಮಂಗಳವಾರ ತಮ್ಮ ...

ಮುಂಬೈ: ಶೀನಾ ಬೊರಾ ಹತ್ಯೆಯ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಅವರಿಗೆ ಮಂಗಳವಾರ ತಮ್ಮ  ತಂದೆಯ ಅಂತಿಮ ಸಂಸ್ಕಾರ ಕಾರ್ಯಗಳನ್ನು ನಡೆಸಲು ಜೈಲಿನಿಂದ ಒಂದು ದಿನದ ಮಟ್ಟಿಗೆ ಹೊರಗೆ ಹೊಗಲು ಸಿಬಿಐ ವಿಶೇಷ ನ್ಯಾಯಾಲಯ ಅವಕಾಶ ನೀಡಿದೆ.
ಸಿಬಿಐ ವಿಶೇಷ  ನ್ಯಾಯಾಲಯದ ಆದೇಶದ ಪ್ರಕಾರ ಬಿಗಿ ಭದ್ರತೆಯೊಂದಿಗೆ ಅವರನ್ನು ಹೊರಗೆ ಬಿಡಲಾಗಿದ್ದು ಬೆಳಗ್ಗೆಯಿಂದ ಸಾಯಂಕಾಲದವರೆಗೆ ತಮ್ಮ ಇಷ್ಟದ ಸ್ಥಳದಲ್ಲಿ ಅಂತಿಮ ವಿಧಿ ಕಾರ್ಯಗಳನ್ನು ನಡೆಸಲು ಅನುವು ಮಾಡಿಕೊಡಲಾಗಿದೆ.
ಇದೇ ಸಂದರ್ಭದಲ್ಲಿ ಬೇರೆಯವರ ಜೊತೆ ಮತ್ತು ಮಾಧ್ಯಮದ ಎದುರು ಮಾತನಾಡುವುದಕ್ಕೆ ಇಂದ್ರಾಣಿ ಮುಖರ್ಜಿಗೆ ನ್ಯಾಯಾಲಯ ನಿರ್ಬಂಧ ವಿಧಿಸಿದೆ. ಕೇಸಿನ ವಿಚಾರಣೆಗೆ ಅಡೆತಡೆಯನ್ನುಂಟುಮಾಡುವ ಯಾವುದೇ ಚಟುವಟಿಕೆಗಳಲ್ಲಿಯೂ ತೊಡಗದಂತೆ ಕೋರ್ಟ್ ಷರತ್ತು ವಿಧಿಸಿದೆ.
ಶೀನಾ ಬೊರಾ ಹತ್ಯೆಯಲ್ಲಿ ಇಂದ್ರಾಣಿ ಮುಖರ್ಜಿಯವರಿಗೆ ನೆರವು ನೀಡಿದ್ದಾಗಿ ಅವರ ಮಾಜಿ ಕಾರು ಚಾಲಕ ತಪ್ಪೊಪ್ಪಿಕೊಂಡಿದ್ದರಿಂದ ಶೀನಾ ಬೊರಾ ಹತ್ಯೆ ಪ್ರಕರಣ ಕಳೆದ ವರ್ಷ ಬೆಳಕಿಗೆ ಬಂದಿತ್ತು. ತನ್ನ ಮಾಜಿ ಪತಿ ಸಂಜೀವ್ ಖನ್ನಾ ಸಹಾಯದಿಂದ ಇಂದ್ರಾಣಿ ಶೀನಾ ಬೊರಾಳನ್ನು ಕತ್ತು ಹಿಸುಕಿ ಸಾಯಿಸಿದ ಆರೋಪ ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT