ಕೇರಳ ಬಸ್ ಅಪಘಾತ: 39 ವಿದ್ಯಾರ್ಥಿಗಳಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ 
ದೇಶ

ಕೇರಳ ಬಸ್ ಅಪಘಾತ: 39 ವಿದ್ಯಾರ್ಥಿಗಳಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ಅಧ್ಯಯನ ಭೇಟಿಗಾಗಿ ಮೈಸೂರಿಗೆ ಆಗಮಿಸಿದ್ದ ಕೇರಳ ಬಸ್ ವೊಂದು ಅಪಘಾತಕ್ಕೀಡಾಗಿದ್ದು, ಶಿಕ್ಷಕರು ಸೇರಿದಂತೆ 39 ವಿದ್ಯಾರ್ಥಿಗಳು ಗಾಯವಾಗಿರುವ ಘಟನೆ ಕೊಡುವಿಲ್ಲೆಯ ಪದನಿಲಂ ಪ್ರದೇಶದಲ್ಲಿ ಮಂಗಳವಾರ...

ಕೋಝಿಕೋಡ್: ಅಧ್ಯಯನ ಭೇಟಿಗಾಗಿ ಮೈಸೂರಿಗೆ ಆಗಮಿಸಿದ್ದ ಕೇರಳ ಬಸ್ ವೊಂದು ಅಪಘಾತಕ್ಕೀಡಾಗಿದ್ದು, ಶಿಕ್ಷಕರು ಸೇರಿದಂತೆ 39 ವಿದ್ಯಾರ್ಥಿಗಳು ಗಾಯವಾಗಿರುವ ಘಟನೆ ಕೊಡುವಿಲ್ಲೆಯ ಪದನಿಲಂ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.

ತಿರುವನಂತಪುರಂನ ಅಟ್ಟಿಂಗಲ್ ಸರ್ಕಾರಿ ಕಾಲೇಜಿಗೆ ವಿದ್ಯಾರ್ಥಿಗಳು ನಿನ್ನೆ ಅಧ್ಯಯನ ಭೇಟಿಗೆಂದು ಮೈಸೂರಿಗೆ ಭೇಟಿ ನೀಡಿತ್ತು. ಭೇಟಿ ಬಳಿಕ ಹಿಂತಿರುಗಿ ಕೇರಳ ರಾಜ್ಯಕ್ಕೆ ಹೋಗುವ ವೇಳೆ ಬಸ್ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ.

ಬಸ್ಸಿನಲ್ಲಿ ಒಟ್ಟು 40 ವಿದ್ಯಾರ್ಥಿಗಳಿದ್ದರು. ಅಪಘಾತದಲ್ಲಿ 39 ವಿದ್ಯಾರ್ಥಿಗಳು ಗಾಯಗೊಂಡಿದ್ದು, 18 ವಿದ್ಯಾರ್ಥಿಗಳನ್ನು ಕೋಝಿಕೋಡ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಇನ್ನುಳಿದ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವೇಗವಾಗಿ ಬರುತ್ತಿದ್ದ ಕಾರಣ ಇಲ್ಲವೇ ಚಾಲಕ ನಿದ್ರೆಗೆ ಜಾರಿದ್ದರಿಂದಾಗಿ ಘಟನೆ ಸಂಭವಿಸಿರಬಹುದು. ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಹೊರಗೆ ಕರೆತರಲಾಗಿತ್ತು. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

Techie Kidnap case: Lakshmi Menonಗೆ ಬಿಗ್ ರಿಲೀಫ್, ನಿರೀಕ್ಷಣಾ ಜಾಮೀನು ಮಂಜೂರು, ಏನಿದು ಪ್ರಕರಣ? ನಟಿ ಹೇಳಿದ್ದೇನು?

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

SCROLL FOR NEXT