ನೋಟು ನಿಷೇಧದ ಬಗ್ಗೆ ಮುಖ್ಯಮಂತ್ರಿಗಳ ಸಮಿತಿ ಸಭೆ 
ದೇಶ

ನೋಟು ನಿಷೇಧದ ಬಗ್ಗೆ ಮುಖ್ಯಮಂತ್ರಿಗಳ ಸಮಿತಿ ಸಭೆ

ನೋಟು ನಿಷೇಧಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಸಮಿತಿ ಸಭೆ ಡಿ.28 ರಂದು ನಡೆಯಲಿದೆ.

ನವದೆಹಲಿ: ನೋಟು ನಿಷೇಧಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಸಮಿತಿ ಸಭೆ ಡಿ.28 ರಂದು ನಡೆಯಲಿದೆ. 
ನ.8 ರಂದು ಕೇಂದ್ರ ಸರ್ಕಾರ ನೋಟು ನಿಷೇಧದ ಘೋಷಣೆಯನ್ನು ಮಾಡಿದ ಬಳಿಕ ನ.26 ರಂದು ನೀತಿ ಆಯೋಗ ಮುಖ್ಯಮಂತ್ರಿಗಳ ಸಮಿತಿ ರಚನೆ ಮಾಡಿ, ನೋಟು ನಿಷೇಧದಿಂದ ಉಂಟಾಗಿರುವ ಸಮಸ್ಯೆಗಳಿಗೆ ಪರಿಹಾರ ಹಾಗೂ ಸುಧಾರಣಾ ಕ್ರಮಗಳ ಬಗ್ಗೆ ಸಲಹೆ ನೀಡುವಂತೆ ಸೂಚಿಸಿತ್ತು. 
ಮುಖ್ಯಮಂತ್ರಿಗಳ ಸಭೆಗೆ ಚಂದ್ರಬಾಬು ನಾಯ್ಡು ಮುಖ್ಯಸ್ಥರಾಗಿದ್ದು, ಮಹಾರಾಷ್ಟ್ರ, ಮಧ್ಯಪ್ರದೇಶ, ಸಿಕ್ಕೀಂ ಹಾಗೂ ಪಾಂಡಿಚರಿ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಬಿಹಾರ ಸಿಎಂ ನಿತೀಶ್ ಕುಮಾರ್ ಹಾಗೂ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಅವರನ್ನೂ ಸಮಿತಿಯ ಸದಸ್ಯ ಮಂಡಳಿಗೆ ಆಹ್ವಾನಿಸಲಾಗಿತ್ತಾದರೂ ಅವರು ಆಹ್ವಾನವನ್ನು ತಿರಸ್ಕರಿಸಿದ್ದರು. 
ಗ್ರಾಮೀಣ ಪ್ರದೇಶಗಳಿಗೆ ಕಡಿಮೆ ಮುಖಬೆಲೆಯ ನೋಟುಗಳನ್ನು ಹೆಚ್ಚು ಪೂರೈಕೆ ಮಾಡುವ ಮೂಲಕ ನಗದು ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಬೇಕೆಂದು ಮುಖ್ಯಮಂತ್ರಿಗಳ ಸಮಿತಿಯ ಮುಖ್ಯಸ್ಥ ಚಂದ್ರಬಾಬು ನಾಯ್ಡು ಆರ್ ಬಿಐ ಗೆ ಇತ್ತೀಚೆಗಷ್ಟೇ ಸಲಹೆ ನೀಡಿದ್ದರು. ನಗದು ರಹಿತ ವಹಿವಾಟು ಹಾಗೂ ಡಿಜಿಟಲ್ ವಹಿವಾಟು ಮಾತ್ರ ನಗದು ಬಿಕ್ಕಟ್ಟಿಗೆ ಸದ್ಯಕ್ಕೆ ಇರುವ ಸಮಸ್ಯೆ ಎಂದು ಚಂದ್ರಬಾಬು ನಾಯ್ಡು ಅಭಿಪ್ರಾಯಪಟ್ಟಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT