ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ನಕಲಿ ಖಾತೆಯಲ್ಲಿ 34 ಕೋಟಿ ರೂ.; ಕೊಟಾಕ್ ಮಹಿಂದ್ರಾ ಬ್ಯಾಂಕ್ ಮ್ಯಾನೇಜರ್ ಬಂಧನ

ನೋಟುಗಳ ಅಮಾನ್ಯತೆ ನಂತರ 34 ಕೋಟಿ ರೂಪಾಯಿಗಳಷ್ಟು ಹಣವನ್ನು 9 ನಕಲಿ ಖಾತೆಗಳ ಮೂಲಕ...

ನವದೆಹಲಿ:  ನೋಟುಗಳ ಅಮಾನ್ಯತೆ ನಂತರ 34 ಕೋಟಿ ರೂಪಾಯಿಗಳಷ್ಟು ಹಣವನ್ನು 9 ನಕಲಿ ಖಾತೆಗಳ ಮೂಲಕ ಠೇವಣಿಯಿರಿಸಿ ಹಣದ ಕಳ್ಳಸಾಗಣೆ ಪ್ರಕರಣ  ತನಿಖೆಗೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಕೊಟಾಕ್ ಮಹಿಂದ್ರಾ ಬ್ಯಾಂಕ್ ನ ವ್ಯವಸ್ಥಾಪಕರನ್ನು ಬಂಧಿಸಿದೆ.
ದೆಹಲಿಯ ಕೆ.ಜಿ.ಮಾರ್ಗ್ ಪ್ರದೇಶದ ಕೊಟಾಕ್ ಮಹಿಂದ್ರಾ ಬ್ಯಾಂಕ್ ನ ವ್ಯವಸ್ಥಾಪಕರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವ್ಯವಸ್ಥಾಪಕರನ್ನು ಹಣ ಕಳ್ಳಸಾಗಣೆ  ತಡೆಗಟ್ಟುವಿಕೆ ಕಾಯ್ದೆಯಡಿ ಬಂಧಿಸಲಾಗಿದ್ದು ಮುಂದಿನ ಕಸ್ಟಡಿಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕೇಸು ಸ್ವೀಕರಿಸಿ ಎಫ್ ಐಆರ್ ದಾಖಲಿಸಿದ್ದಾರೆ. 
ಪೊಲೀಸರು ಕಳೆದ ವಾರ ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿದ್ದರು.ಆದರೆ ತಮ್ಮಲ್ಲಿ ಯಾವುದೇ ನಕಲಿ ಖಾತೆಗಳನ್ನು ತೆರೆದಿಲ್ಲ. ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT