ನವದೆಹಲಿ: ನೋಟುಗಳ ಅಮಾನ್ಯತೆ ನಂತರ 34 ಕೋಟಿ ರೂಪಾಯಿಗಳಷ್ಟು ಹಣವನ್ನು 9 ನಕಲಿ ಖಾತೆಗಳ ಮೂಲಕ ಠೇವಣಿಯಿರಿಸಿ ಹಣದ ಕಳ್ಳಸಾಗಣೆ ಪ್ರಕರಣ ತನಿಖೆಗೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಕೊಟಾಕ್ ಮಹಿಂದ್ರಾ ಬ್ಯಾಂಕ್ ನ ವ್ಯವಸ್ಥಾಪಕರನ್ನು ಬಂಧಿಸಿದೆ.
ದೆಹಲಿಯ ಕೆ.ಜಿ.ಮಾರ್ಗ್ ಪ್ರದೇಶದ ಕೊಟಾಕ್ ಮಹಿಂದ್ರಾ ಬ್ಯಾಂಕ್ ನ ವ್ಯವಸ್ಥಾಪಕರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವ್ಯವಸ್ಥಾಪಕರನ್ನು ಹಣ ಕಳ್ಳಸಾಗಣೆ ತಡೆಗಟ್ಟುವಿಕೆ ಕಾಯ್ದೆಯಡಿ ಬಂಧಿಸಲಾಗಿದ್ದು ಮುಂದಿನ ಕಸ್ಟಡಿಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕೇಸು ಸ್ವೀಕರಿಸಿ ಎಫ್ ಐಆರ್ ದಾಖಲಿಸಿದ್ದಾರೆ.
ಪೊಲೀಸರು ಕಳೆದ ವಾರ ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿದ್ದರು.ಆದರೆ ತಮ್ಮಲ್ಲಿ ಯಾವುದೇ ನಕಲಿ ಖಾತೆಗಳನ್ನು ತೆರೆದಿಲ್ಲ. ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ವಕ್ತಾರರು ತಿಳಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos