ಸಂಗ್ರಹ ಚಿತ್ರ 
ದೇಶ

ಕೋಮು ಗಲಭೆ ವರದಿ: ಪ.ಬಂಗಾಳ ಸರ್ಕಾರದಿಂದ ಜೀ ನ್ಯೂಸ್ ವಿರುದ್ಧ ದೂರು ದಾಖಲು!

ಕಳೆದ ಡಿಸೆಂಬರ್ 12ರಂದು ದುಲಾಘಡ್ ನಲ್ಲಿ ನಡೆದಿದ್ದ ಕೋಮುಗಲಭೆಯ ವರದಿ ಮಾಡಿದ್ದ ಜೀ ನ್ಯೂಸ್ ಸಂಸ್ಥೆ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರ ಪೊಲೀಸ್ ದೂರು ದಾಖಲಿಸಿದೆ ಎಂದು ಹೇಳಲಾಗುತ್ತಿದೆ.

ಕೋಲ್ಕತಾ: ಕಳೆದ ಡಿಸೆಂಬರ್ 12ರಂದು ದುಲಾಘಡ್ ನಲ್ಲಿ ನಡೆದಿದ್ದ ಕೋಮುಗಲಭೆಯ ವರದಿ ಮಾಡಿದ್ದ ಜೀ ನ್ಯೂಸ್ ಸಂಸ್ಥೆ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರ ಪೊಲೀಸ್ ದೂರು ದಾಖಲಿಸಿದೆ ಎಂದು ಹೇಳಲಾಗುತ್ತಿದೆ.

ಜೀ ನ್ಯೂಸ್ ಸಂಸ್ಥೆಯ ಸಂಪಾದಕ ಸುಧೀರ್ ಚೌದರಿ, ಸಂಸ್ಥೆಯ ಪಶ್ಚಿಮ ಬಂಗಾಳ ವರದಿಗಾರ್ತಿ ಪೂಜಾ ಮೆಹ್ತಾ ಹಾಗೂ ಕ್ಯಾಮೆರಾಮೆನ್ ತನ್ಮಯ್ ಮುಖರ್ಜಿ ವಿರುದ್ಧ ಸೆಕ್ಷನ್ 153-ಎ (ದ್ವೇಷ ಪ್ರಚಾರ) ಅಡಿಯಲ್ಲಿ ಜಾಮೀನು ರಹಿತ  ದೂರು ದಾಖಲು ಮಾಡಲಾಗಿದೆ.  ಕಳೆದ ಡಿಸೆಂಬರ್ 12ರಂದು ಪ್ರವಾದಿ ಮಹಮದ್ ಜನ್ಮದಿನ ಆಚರಣೆ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ವಿವಿಧೆಡೆ ಹಿಂಸಾಚಾರ ಭುಗಿಲೆದ್ದಿತ್ತು. ಈ ಪೈಕಿ ದುಲಾಘಡ್ ನಲ್ಲಿ ನಡೆಯುತ್ತಿದ್ದ  ಹಿಂಸಾಚಾರವನ್ನು ಜೀ ನ್ಯೂಸ್ ಸಂಸ್ಥೆ ವರದಿ ಮಾಡಿತ್ತು. ಇದೀಗ ಇದೇ ವಿಚಾರವಾಗಿ ಸುದ್ದಿ ಸಂಸ್ಥೆಯ ವಿರುದ್ಧ ಮಮತಾ ಬ್ಯಾನರ್ಜಿ ಸರ್ಕಾರ ದೂರು ದಾಖಲಿಸಿದೆ.

ಇನ್ನು ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರವನ್ನು ಜೀ ನ್ಯೂಸ್ ಸಂಪಾದಕ ಸುಧೀರ್ ಚೌದರಿ ಅವರು ಟೀಕಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರ ತನ್ನ ಆಡಳಿತ  ವೈಫಲ್ಯವನ್ನು ಮರೆಮಾಚಲು ಮಾಧ್ಯಮಗಳ ಮೇಲೆ ಗೂಬೆ ಕೂರಿಸುತ್ತಿದೆ. ಮಾಧ್ಯಮಗಳ ವಿರುದ್ಧದ ನಿರ್ಧಾರ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಮಾಧ್ಯಮಗಳ ವಿರುದ್ಧದ ಅಸಹಿಷ್ಣುತೆಯನ್ನು  ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಸರ್ಕಾರದ ಕ್ರಮಕ್ಕೆ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವಂತೆಯೇ ದೂರು ದಾಖಲಾಗಿರುವ ಸಂಕ್ರೈಲ್ ಪೊಲೀಸ್ ಠಾಣೆಯ ಪೊಲೀಸರು ಮಾತ್ರ ಈ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಗಲಭೆ  ಸಂಬಂಧ ಈ ವರೆಗೂ 30 ಎಫ್ ಐಆರ್ ಗಳನ್ನು ದಾಖಲು ಮಾಡಲಾಗಿದೆ. ಆದರೆ ದುಲಾಘಡ್ ಗಲಭೆ ಸಂಬಂಧ ವಿವರ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಪ್ರಸ್ತುತ ದುಲಾಘಡ್ ನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು,  ದುಲಾಘಡ್ ನಾದ್ಯಂತ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳಲ್ಲೂ ಬ್ಯಾರಿಕೇಡ್ ಹಾಕಲಾಗಿದ್ದು, ಯಾವುದೇ ಮಾಧ್ಯಮ ಪ್ರತಿನಿಧಿಗಳಿಗೂ ಗ್ರಾಮ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗುತ್ತಿದೆ  ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT