2000 ರೂ ಹೊಸ ನೋಟು (ಸಂಗ್ರಹ ಚಿತ್ರ) 
ದೇಶ

ನೋಟು ನಿಷೇಧದ ಎಫೆಕ್ಟ್: ಕಂತುಗಳಲ್ಲಿ ಲಂಚ ಸ್ವೀಕರಿಸುತ್ತಿರುವ ಭ್ರಷ್ಟ ಅಧಿಕಾರಿಗಳು!

ನೋಟು ನಿಷೇಧದ ನಂತರ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುತ್ತದೆ ಎಂಬ ನಿರೀಕ್ಷೆ ಸುಳ್ಳಾಗಿದೆ. ನೋಟು ನಿಷೇಧವಾದರೂ ಅಧಿಕಾರಿಗಳು ಲಂಚ ಸ್ವೀಕರಿಸುವುದಕ್ಕೆ ಪರ್ಯಾಯ ಮಾರ್ಗಗಳನ್ನು ಕಂಡುಕೊಂಡಿದ್ದಾರೆ.

ನವದೆಹಲಿ: ನೋಟು ನಿಷೇಧದ ನಂತರ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುತ್ತದೆ ಎಂಬ ನಿರೀಕ್ಷೆ ಸುಳ್ಳಾಗಿದೆ. ನೋಟು ನಿಷೇಧವಾದರೂ ಅಧಿಕಾರಿಗಳು ಲಂಚ ಸ್ವೀಕರಿಸುವುದಕ್ಕೆ ಪರ್ಯಾಯ ಮಾರ್ಗಗಳನ್ನು ಕಂಡುಕೊಂಡಿದ್ದಾರೆ. ಅದೇನೆಂದರೆ ಲಂಚವನ್ನೂ ಕಂತಿನಲ್ಲಿ ಪಾವತಿ ಮಾಡುವುದು. 
ಕಂತುಗಳಲ್ಲಿ ಲಂಚ ಸ್ವೀಕರಿಸುತ್ತಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿ ಅಧಿಕಾರಿ ಸಿಬಿಐ ಬಲೆಗೆ ಬಿದ್ದಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಆದಾಯ ತೆರಿಗೆ ಅಧಿಕಾರಿಯಾಗಿರುವ ಬಿ ಶ್ರೀನಿವಾಸ ರಾವ್  ಬಿಲ್ಡರ್ ನಿಂದ 1.5 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ 500, 1000 ರೂ ನೋಟು ನಿಷೇಧದಿಂದ ಒಂದೇ ಬಾರಿಗೆ 1.5 ಲಕ್ಷ ರೂಪಾಯಿ ಮೊತ್ತವನ್ನು ನೀಡುವುದಕ್ಕೆ ಸಾಧ್ಯವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಕಂತುಗಳಲ್ಲಿ ಲಂಚ ಪಾವತಿಸುವಂತೆ ಆದಾಯ ತೆರಿಗೆ ಅಧಿಕಾರಿ ಯತ್ನಿಸಿದ್ದರು. 30,000 ರೂ ಮೊತ್ತದ ಮೊದಲ ಕಂತಿನ ಲಂಚ ಸ್ವೀಕರಿಸುತ್ತಿದ್ದಾಗ ಅಧಿಕಾರಿ ಸಿಬಿಐಗೆ ಸಿಕ್ಕಿಬಿದ್ದಿದ್ದಾರೆ. ದಾಳಿ ನಡೆಸಿದ ವೇಳೆ ಮಹತ್ವದ ದಾಖಲೆಗಳು ಹಾಗೂ 2.03 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT