ಆರ್ ಬಿಐ 
ದೇಶ

ನೋಟು ನಿಷೇಧ: ಸಾಲ ಮರು ಪಾವತಿ ಅವಧಿ 90 ದಿನಗಳಿಗೆ ವಿಸ್ತರಣೆ

ನೋಟುಗಳ ರದ್ದತಿ ಪರಿಣಾಮ, ನೋಟುಗಳ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ಗಳಲ್ಲಿ ಸಾಲ ಪಡೆದಿರುವ ಗ್ರಾಹಕರಿಗೆ ಸಾಲ ಮರುಪಾವತಿ ಮಾಡಲು ಇದ್ದ ಅವಧಿಯನ್ನು 90 ದಿನಗಳವರೆಗೆ ವಿಸ್ತರಣೆ

ನವದೆಹಲಿ: 500, 1000 ರೂ ನೋಟುಗಳ ರದ್ದತಿ ಪರಿಣಾಮ, ನೋಟುಗಳ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ಗಳಲ್ಲಿ ಸಾಲ ಪಡೆದಿರುವ ಗ್ರಾಹಕರಿಗೆ ಸಾಲ ಮರುಪಾವತಿ ಮಾಡಲು ಇದ್ದ ಅವಧಿಯನ್ನು 90 ದಿನಗಳವರೆಗೆ ವಿಸ್ತರಿಸಲಾಗಿದೆ. ಆರ್ ಬಿಐ ಈ ಬಗ್ಗೆ ಅಧಿಕೃತಪಡಿಸಿದ್ದು,  ನ.1 ರಿಂದ ಡಿ.31 ರವರೆಗೆ ಪಾವತಿ ಮಾಡಬೇಕಿರುವವರಿಗೆ ಮಾತ್ರ 90 ದಿನಗಳ ಹೆಚ್ಚುವರಿ ಕಾಲಾವಕಾಶ ಅನ್ವಯವಾಗಲಿದೆ ಎಂದು ಹೇಳಿದೆ. ಇದಕ್ಕೂ ಮುನ್ನ ನವೆಂಬರ್ 21 ರಂದು 60 ದಿನಗಳ ವರೆಗೆ ವಿಸ್ತರಿಸಿ ಆರ್ ಬಿಐ ಆದೇಶ ಹೊರಡಿಸಿತ್ತು.
ನವೆಂಬರ್‌ 1ರಿಂದ ಡಿಸೆಂಬರ್‌ 31ರೊಳಗೆ ಪಾವತಿಸಬೇಕಾಗಿದ್ದ 1 ಕೋಟಿ ರೂ. ಅಥವಾ ಅದಕ್ಕಿಂತ ಕಮ್ಮಿ ಸಾಲಗಳಿಗೆ ಈ ಹೆಚ್ಚುವರಿ ಕಾಲಾವಧಿ ಅನ್ವಯಿಸುತ್ತದೆ.  ಒಂದು ಕೋಟಿ ರೂ ಗಿಂತ ಕಡಿಮೆ ಇರುವ ವ್ಯಾಪಾರ ಅಥವಾ ವೈಯಕ್ತಿಕ ವಿಭಾಗದ ದೀರ್ಘಾವಧಿಯ ಸಾಲ, ಬ್ಯಾಂಕೇತರ ಹಣಕಾಸು ಕಂಪನಿ (ಮೈಕ್ರೋ ಫೈನಾನ್ಸ್ ಸಂಸ್ಥೆ)ಗಳ ಸಾಲದ ಕಂತುಗಳಿಗೂ ಇದೇ ನಿಯಮ ಅನ್ವಯವಾಗಲಿದೆ ಎಂದು ಆರ್ ಬಿಐ ಸ್ಪಷ್ಟಪಡಿಸಿದೆ. ಆರ್ ಬಿಐ ನೀಡಿರುವ ಹೆಚ್ಚುವರಿ ಕಾಲಾವಕಾಶ ಗೃಹ ಸಾಲ, ಕೃಷಿ ಸಾಲಗಳಿಗೂ ಅನ್ವಯಿಸಲಿದ್ದು ಎಲ್ಲಾ ನಿಯಂತ್ರಿತ ಹಣಕಾಸು ಸಂಸ್ಥೆಗಳು ಆರ್ ಬಿಐ ನ ನಿಯಮಗಳನ್ನು ಪಾಲಿಸಬೇಕು ಎಂದು ಆರ್ ಬಿಐ ಹೇಳಿದೆ. ಆರ್ ಬಿಐ ನ ನೂತನ ಕ್ರಮದಿಂದ ಸಾಲಗಾರರ ಖಾತೆಯು ವಸೂಲಿಯಾಗದ ಆಸ್ತಿ (ಎನ್‌ಪಿಎ) ವರ್ಗದಡಿ ಬೀಳುವ ಆತಂಕ ತಾತ್ಕಾಲಿಕವಾಗಿ ದೂರವಾಗಿದೆ.
ನೋಟು ನಿಷೇಧದ ನಂತರ ನಗದು ಮೂಲಕ ನಡೆಯುತ್ತಿದ್ದ ಆರ್ಥಿಕ ಚಟುವಟಿಕೆಗಳು ಕ್ಷೀಣಗೊಂಡಿದ್ದವು ಪರಿಣಾಮ ಸಾಲಗಾರರಿಗೆ ಬ್ಯಾಂಕ್ ಮೂಲಕ ಪಡೆದ ಸಾಲ ಮರುಪಾವತಿ ಮಾಡಲು ಸಾಧ್ಯವಾಗದೇ ವಸೂಲಿಯಾಗಬೇಕಿದ್ದ ಸಾಲದ ಬಾಕಿ ಮೊತ್ತವೂ ಏರಿಕೆಯಾಗುವ ಸಾಧ್ಯತೆ ಇತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT